Advertisement
MIRROR FOCUS

ದಕ್ಷಿಣ ಭಾರತದಲ್ಲಿ ರಣ ಭೀಕರ ಮಳೆ | ಉತ್ತರ ಕಾಶ್ಮೀರದಲ್ಲಿ ಬಿಸಿಲಿನ ಹೊಡೆತ | ಶಾಲೆಗಳಿಗೆ ರಜೆ ಘೋಷಣೆ, ಮಳೆಗಾಗಿ ಪ್ರಾರ್ಥನೆ

Share

ಭಾರತದ ದಕ್ಷಿಣ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಮಳೆಯ ಅಬ್ಬರಕ್ಕೆ  ಜನ ಜೀವನ ಹೈರಾಣಾಗಿದೆ. ಆದರೆ ಅತ್ತ ಕಾಶ್ಮೀರ ಕಣಿವೆಯ ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದೆದಾರೆ. ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ ರಾತ್ರಿ ಗರಿಷ್ಠ 24.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲು ಮತ್ತು ಬಿಸಿ ಗಾಳಿಯಿಂದ ತತ್ತರಿಸಿದ್ದಾರೆ. ಬಿಸಿಲಿನ ಹೊಡೆತದಿಂದ ಹೊರಬರಲು ಫ್ಯಾನ್​, ಏರ್​ ಕೂಲರ್​, ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಎರಡು ದಿನಗಳ ಕಾಲ ಶಾಲೆಗಳಿಗೂ ಕೂಡ ರಜೆ ಘೋಷಿಸಲಾಗಿದೆ.

ಇದು ಸಾಮಾನ್ಯ ದಿನಕ್ಕಿಂತ 6.0 ಡಿಗ್ರಿ ಹೆಚ್ಚಾಗಿದೆ. ಜುಲೈ 21, 1988 ರಂದು ದಾಖಲಾದ ಅತ್ಯಧಿಕ ಕನಿಷ್ಠ ತಾಪಮಾನವು 25.2 ಡಿಗ್ರಿ ಸೆಲ್ಸಿಯಸ್ ಆಗಿದೆ. ಕಾಶ್ಮೀರ ಕಣಿವೆಯಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಶಾಖ ಹೆಚ್ಚಾಗುತ್ತಿರುವ ಹಿನ್ನೆಲೆ ಜುಲೈ 29 ಮತ್ತು 30 ರಂದು ಪ್ರಾಥಮಿಕ ಹಂತದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ವಿಭಾಗೀಯ ಆಯುಕ್ತ ವಿ ಕೆ ಬಿಧುರಿ ಆದೇಶ ಹೊರಡಿಸಿದ್ದಾರೆ.
ಋತುಮಾನದ ಸರಾಸರಿಗಿಂತ 6 ಡಿಗ್ರಿ ಸೆಲ್ಸಿಯಸ್​​​​​​ ಹೆಚ್ಚು: ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿ ಶ್ರೀನಗರಲ್ಲಿ ಕನಿಷ್ಠ 24.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಋತುಮಾನದ ಸರಾಸರಿಗಿಂತ ಸುಮಾರು 6.0 ಡಿಗ್ರಿ ಡಿಗ್ರಿಗಳಷ್ಟು ಹೆಚ್ಚಾಗಿದೆ. ಈ ತಾಪಮಾನವು ಜುಲೈ 26, 2021 ರಂದು ದಾಖಲಾದ ಎರಡನೇ ಅತಿ ಹೆಚ್ಚು ಕನಿಷ್ಠ ತಾಪಮಾನಕ್ಕೆ ಸರಿಸಮಾನವಾಗಿದೆ. ಜುಲೈ 21, 1988 ರಂದು ದಾಖಲಿಸಲಾದ ಅತ್ಯಧಿಕ ಕನಿಷ್ಠ ತಾಪಮಾನವು 25.2 ಡಿಗ್ರಿ ಸೆಲ್ಸಿಯಸ್ ಆಗಿದೆ. ತಣ್ಣನೆಯ ಕಾಶ್ಮೀರದದಲ್ಲಿ ಸೂರ್ಯನ ಶಾಖದಿಂದ ಜನರು ಬೇಸತ್ತು ಹೋಗಿದ್ದಾರೆ. ಹಲವರು ಏರ್ ಕೂಲರ್‌ಗಳ ಮೊರೆ ಹೋಗುತ್ತಿದ್ದಾರೆ ಎಂದು ಸ್ವತಂತ್ರ ಹವಾಮಾನ ಮುನ್ಸೂಚಕ ಫೈಜಾನ್ ಆರಿಫ್ ಮಾಹಿತಿ ನೀಡಿದ್ದಾರೆ. ಜನರು ಫ್ಯಾನ್​, ಏರ್​ ಕೂಲರ್​ ಮೊರೆ ಹೋಗಿದ್ದರಿಂದ ಹವಾನಿಯಂತ್ರಿತ (ಎಸಿ) ಗಳಿಗೆ ಬೇಡಿಕೆ ಹೆಚ್ಚಾಗಿದೆ. ಶ್ರೀನಗರದ ಓಲ್ಡ್ ಸಿಟಿಯಲ್ಲಿ ಇವುಗಳ ಮಾರಾಟದ ಪ್ರಮಾಣದಲ್ಲಿ ಹೆಚ್ಚಾಗಿದೆ.

ತಾಪಮಾನ ಇಳಿಕೆ ಮುನ್ಸೂಚನೆ: ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಭಾನುವಾರದಂದು ಅತಿ ಹೆಚ್ಚು ಮತ್ತು ಮೂರನೇ ಸಾರ್ವಕಾಲಿಕ ಗರಿಷ್ಠ 36.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಜುಲೈ 10, 1946 ರಂದು ಶ್ರೀನಗರದಲ್ಲಿ ಸಾರ್ವಕಾಲಿಕ ಗರಿಷ್ಠ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಜುಲೈ 9, 1999 ರಂದು 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.

ಬಿಸಿಲು ಹೆಚ್ಚಾಗಿದ್ದರಿಂದ ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಜನರು, ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ. ಬಿಸಿಲು ಮಕ್ಕಳ ಮೇಲೂ ಪರಿಣಾಮ ಬೀರಬಹುದು ಎಂಬ ಕಾರಣದಿಂದ ಕಾಶ್ಮೀರ ವಿಭಾಗೀಯ ಆಡಳಿತವು ಜು. 29 ಮತ್ತು 30 ರಂದು ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರಾಥಮಿಕ ಹಂತದವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದೆ. ಆದರೆ, ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಇತರರು ಕೆ ಕರ್ತವ್ಯಕ್ಕೆ ಹಾಜರಾಗುವಂತೆ ವಿಭಾಗೀಯ ಆಯುಕ್ತ ವಿ ಕೆ ಬಿಧುರಿ ಅಧಿಕೃತ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಕಾಶ್ಮೀರದ ಕೆಲವು ಭಾಗಗಳಲ್ಲಿ ಸೋಮವಾರ ಮಳೆ ಸುರಿದಿದ್ದು, ಬಿಸಿಲು ಬೇಗೆಯಿಂದ ತತ್ತರಿಸಿದ್ದ ಜನರು ನಿರಾಳರಾಗಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

16 minutes ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

22 minutes ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

7 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

3 days ago