ಭಾರತದ ದಕ್ಷಿಣ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜನ ಜೀವನ ಹೈರಾಣಾಗಿದೆ. ಆದರೆ ಅತ್ತ ಕಾಶ್ಮೀರ ಕಣಿವೆಯ ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದೆದಾರೆ. ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ ರಾತ್ರಿ ಗರಿಷ್ಠ 24.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲು ಮತ್ತು ಬಿಸಿ ಗಾಳಿಯಿಂದ ತತ್ತರಿಸಿದ್ದಾರೆ. ಬಿಸಿಲಿನ ಹೊಡೆತದಿಂದ ಹೊರಬರಲು ಫ್ಯಾನ್, ಏರ್ ಕೂಲರ್, ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಎರಡು ದಿನಗಳ ಕಾಲ ಶಾಲೆಗಳಿಗೂ ಕೂಡ ರಜೆ ಘೋಷಿಸಲಾಗಿದೆ.
ತಾಪಮಾನ ಇಳಿಕೆ ಮುನ್ಸೂಚನೆ: ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಭಾನುವಾರದಂದು ಅತಿ ಹೆಚ್ಚು ಮತ್ತು ಮೂರನೇ ಸಾರ್ವಕಾಲಿಕ ಗರಿಷ್ಠ 36.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಜುಲೈ 10, 1946 ರಂದು ಶ್ರೀನಗರದಲ್ಲಿ ಸಾರ್ವಕಾಲಿಕ ಗರಿಷ್ಠ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಜುಲೈ 9, 1999 ರಂದು 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…