ಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ಟೂರ್ ವಿಶೇಷ ಪ್ಯಾಕೇಜ್ ಪ್ರಕಟ

January 14, 2023
9:32 PM

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ವಿಶೇಷ ಕಾಶಿ ಟೂರ್ ಪ್ಯಾಕೇಜ್ ಪ್ರಕಟಿಸಲಾಗಿದೆ. ಭಾರತೀಯ ರೈಲ್ವೇ, ಟ್ರಾವೆಲ್ಸ್ ಟೈಮ್ಸ್ ಇಂಡಿಯಾ ಟೂರಿಸಂ ಸಂಸ್ಥೆ ಸಹಯೋಗದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ 16,500 ರೂ.ಗೆ 9 ದಿನಗಳ ವಿಶೇಷ ಪ್ಯಾಕೇಜ್ ಟೂರ್ ಪ್ರಕಟಿಸಲಾಗಿದೆ.

ಪ್ರಸಿದ್ಧ ತೀರ್ಥಕ್ಷೇತ್ರಗಳಾದ ವಾರಣಾಸಿ, ಗಯಾ, ಪ್ರಯಾಗ್ ರಾಜ್, ಅಯೋಧ್ಯೆಗೆ ಭೇಟಿ ನೀಡಿ ದೇವರ ದರ್ಶನ ಮಾಡಿಸಲಾಗುವುದು. ಊಟ, ತಂಗುವ ಸ್ಥಳದ ಅನುಕೂಲ, ವೈದ್ಯಕೀಯ ವ್ಯವಸ್ಥೆ ಇರಲಿದೆ ಎಂದು ಟ್ರಾವೆಲ್ ಟೈಮ್ಸ್ ಇಂಡಿಯಾ ವ್ಯವಸ್ಥಾಪಕ ವಿಘ್ನೇಶ್ ತಿಳಿಸಿದ್ದಾರೆ.

16,500 ರೂ. ಮತ್ತು 18,750 ರೂ.ಗಳಿಂದ ಈ ವಿಶೇಷ ಪ್ಯಾಕೇಜ್ ಟೂರ್ ಪ್ರಾರಂಭವಾಗಲಿದ್ದು, ಒಟ್ಟು 600 ಜನ ಪ್ರಯಾಣಿಸುವ ರೈಲು ಇದಾಗಿದೆ. ಫೆಬ್ರವರಿ 12ರಂದು ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುವುದು.

ಆನ್ಲೈನ್ ಬುಕಿಂಗ್ ಗಾಗಿ www.ularail.com, ಮೊಬೈಲ್ ಸಂಖ್ಯೆ 90436 85850, 96203 93938 ಗೆ ಕರೆ ಮಾಡಿ ಆಸನ ಕಾಯ್ದಿರಿಸಬಹುದಾಗಿದೆ ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror