ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ವಿಶೇಷ ಕಾಶಿ ಟೂರ್ ಪ್ಯಾಕೇಜ್ ಪ್ರಕಟಿಸಲಾಗಿದೆ. ಭಾರತೀಯ ರೈಲ್ವೇ, ಟ್ರಾವೆಲ್ಸ್ ಟೈಮ್ಸ್ ಇಂಡಿಯಾ ಟೂರಿಸಂ ಸಂಸ್ಥೆ ಸಹಯೋಗದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ 16,500 ರೂ.ಗೆ 9 ದಿನಗಳ ವಿಶೇಷ ಪ್ಯಾಕೇಜ್ ಟೂರ್ ಪ್ರಕಟಿಸಲಾಗಿದೆ.
ಪ್ರಸಿದ್ಧ ತೀರ್ಥಕ್ಷೇತ್ರಗಳಾದ ವಾರಣಾಸಿ, ಗಯಾ, ಪ್ರಯಾಗ್ ರಾಜ್, ಅಯೋಧ್ಯೆಗೆ ಭೇಟಿ ನೀಡಿ ದೇವರ ದರ್ಶನ ಮಾಡಿಸಲಾಗುವುದು. ಊಟ, ತಂಗುವ ಸ್ಥಳದ ಅನುಕೂಲ, ವೈದ್ಯಕೀಯ ವ್ಯವಸ್ಥೆ ಇರಲಿದೆ ಎಂದು ಟ್ರಾವೆಲ್ ಟೈಮ್ಸ್ ಇಂಡಿಯಾ ವ್ಯವಸ್ಥಾಪಕ ವಿಘ್ನೇಶ್ ತಿಳಿಸಿದ್ದಾರೆ.
16,500 ರೂ. ಮತ್ತು 18,750 ರೂ.ಗಳಿಂದ ಈ ವಿಶೇಷ ಪ್ಯಾಕೇಜ್ ಟೂರ್ ಪ್ರಾರಂಭವಾಗಲಿದ್ದು, ಒಟ್ಟು 600 ಜನ ಪ್ರಯಾಣಿಸುವ ರೈಲು ಇದಾಗಿದೆ. ಫೆಬ್ರವರಿ 12ರಂದು ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುವುದು.
ಆನ್ಲೈನ್ ಬುಕಿಂಗ್ ಗಾಗಿ www.ularail.com, ಮೊಬೈಲ್ ಸಂಖ್ಯೆ 90436 85850, 96203 93938 ಗೆ ಕರೆ ಮಾಡಿ ಆಸನ ಕಾಯ್ದಿರಿಸಬಹುದಾಗಿದೆ ಎಂದು ಹೇಳಲಾಗಿದೆ.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…