ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ವಿಶೇಷ ಕಾಶಿ ಟೂರ್ ಪ್ಯಾಕೇಜ್ ಪ್ರಕಟಿಸಲಾಗಿದೆ. ಭಾರತೀಯ ರೈಲ್ವೇ, ಟ್ರಾವೆಲ್ಸ್ ಟೈಮ್ಸ್ ಇಂಡಿಯಾ ಟೂರಿಸಂ ಸಂಸ್ಥೆ ಸಹಯೋಗದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ 16,500 ರೂ.ಗೆ 9 ದಿನಗಳ ವಿಶೇಷ ಪ್ಯಾಕೇಜ್ ಟೂರ್ ಪ್ರಕಟಿಸಲಾಗಿದೆ.
ಪ್ರಸಿದ್ಧ ತೀರ್ಥಕ್ಷೇತ್ರಗಳಾದ ವಾರಣಾಸಿ, ಗಯಾ, ಪ್ರಯಾಗ್ ರಾಜ್, ಅಯೋಧ್ಯೆಗೆ ಭೇಟಿ ನೀಡಿ ದೇವರ ದರ್ಶನ ಮಾಡಿಸಲಾಗುವುದು. ಊಟ, ತಂಗುವ ಸ್ಥಳದ ಅನುಕೂಲ, ವೈದ್ಯಕೀಯ ವ್ಯವಸ್ಥೆ ಇರಲಿದೆ ಎಂದು ಟ್ರಾವೆಲ್ ಟೈಮ್ಸ್ ಇಂಡಿಯಾ ವ್ಯವಸ್ಥಾಪಕ ವಿಘ್ನೇಶ್ ತಿಳಿಸಿದ್ದಾರೆ.
16,500 ರೂ. ಮತ್ತು 18,750 ರೂ.ಗಳಿಂದ ಈ ವಿಶೇಷ ಪ್ಯಾಕೇಜ್ ಟೂರ್ ಪ್ರಾರಂಭವಾಗಲಿದ್ದು, ಒಟ್ಟು 600 ಜನ ಪ್ರಯಾಣಿಸುವ ರೈಲು ಇದಾಗಿದೆ. ಫೆಬ್ರವರಿ 12ರಂದು ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುವುದು.
ಆನ್ಲೈನ್ ಬುಕಿಂಗ್ ಗಾಗಿ www.ularail.com, ಮೊಬೈಲ್ ಸಂಖ್ಯೆ 90436 85850, 96203 93938 ಗೆ ಕರೆ ಮಾಡಿ ಆಸನ ಕಾಯ್ದಿರಿಸಬಹುದಾಗಿದೆ ಎಂದು ಹೇಳಲಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…