Advertisement
MIRROR FOCUS

ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ ಗುಡ್ಡಕ್ಕೆ ಬೆಂಕಿ | ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ | ಬೆಂಕಿ ನಂದಿಸಲು ಹರಸಾಹಸಪಟ್ಟ ಅಗ್ನಿಶಾಮಕ ಸಿಬ್ಬಂದಿ

Share

ಬೇಸಿಗೆಯ ಉರಿ ಬಿಸಿಲಿನ ತಾಪ ಏರುತ್ತಿದ್ದಂತೆ ಮೊದಲು ಸಮಸ್ಯೆ ಉಂಟಾಗೋದು ಅರಣ್ಯ ಪ್ರದೇಶಗಳಿಗೆ(Forest). ಈ ಸಮಯದಲ್ಲಿ ಕಾಡು ಪ್ರಾಣಿಗಳ(Animals) ಘರ್ಷಣೆಯಿಂದಲೂ ಅಥವಾ ಕಿಡಿಗೇಡಿಗಳು ಹಾಕಿವ ಬೆಂಕಿಯಿಂದಲೂ(Fire) ಕಾಡಿಗೆ ಬೆಂಕಿ ಹೊತ್ತಿಕೊಳ್ಳುತ್ತದೆ. ಇದರಿಂದ ಅಪಾರ ಪ್ರಮಾಣದ ಕಾಡು ಸಂಪತ್ತು, ಪ್ರಾಣಿ, ಪಕ್ಷಿಗಳು ನಾಶವಾಗುತ್ತವೆ. ಇದೀಗ ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವು(Tourism) ಆಗಿರುವ ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಬೆಟ್ಟದಲ್ಲಿ (Mullayanagiri Peak) ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

Advertisement
Advertisement

ಎತ್ತರ ಹಾಗೂ ಇಳಿಜಾರಿನ ಬೆಟ್ಟಕ್ಕೆ ಬೆಂಕಿ ವ್ಯಾಪಿಸಿರುವುದರಿಂದ ಕೆಲ ಸ್ಥಳಕ್ಕೆ ಹೋಗಲು ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗೂ ಸಾಧ್ಯವಾಗುತ್ತಿಲ್ಲ. ಆದರೂ, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲು ಎಂದರೇನೆ ಅಪರೂಪದ ಸಸ್ಯ ಸಂಪತ್ತಿನ ರಾಶಿ. ಬಿಸಿಲಿನ ಝಳಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ ಪರಿಣಾಮ ನೂರಾರು ಎಕರೆ ಅಪರೂಪದ ಸಸ್ಯರಾಶಿ ಕೂಡ ಸುಟ್ಟು ಭಸ್ಮವಾಗಿದೆ.

Advertisement

ಸ್ಥಳಕ್ಕೆ ಭೇಟಿ ನೀಡಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಜೊತೆ ಸ್ಥಳೀಯರು ಕೂಡ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಆದರೆ, ಭಾರೀ ಗಾಳಿಗೆ ಬೆಂಕಿಯ ಜ್ವಾಲೆ ಹರಡುತ್ತಲೇ ಇದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹೋರಾಡುತ್ತಿದ್ದಾರೆ. ಇಂದು ಭಾನುವಾರವಾದ್ದರಿಂದ ನೂರಾರು ಪ್ರವಾಸಿಗರು ಕೂಡ ಮುಳ್ಳಯ್ಯನಗಿರಿಗೆ ಭೇಟಿ ನೀಡಿದ್ದಾರೆ. ಮುಳ್ಳಯ್ಯನಗಿರಿ ಮಾರ್ಗದಲ್ಲೇ ಬೆಂಕಿ ಹೊತ್ತಿರುವುದರಿಂದ ರಸ್ತೆ ಬದಿಯಲ್ಲೂ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಪ್ರವಾಸಿಗರು ಮುಳ್ಳಯ್ಯನಗಿರಿಯಿಂದ ಚಿಕ್ಕಮಗಳೂರಿಗೆ ಬರಲು ಸಾಧ್ಯವಾಗದೇ ಮುಳ್ಳಯ್ಯನಗಿರಿ ಮಾರ್ಗದಲ್ಲೇ ಜಾಮ್ ಆಗಿದ್ದಾರೆ.

Advertisement

ಅರಣ್ಯ ಅಧಿಕಾರಿಗಳು ಬೆಂಕಿಯ ಜ್ವಾಲೆ ಸ್ವಲ್ಪ ಕಡಿಮೆಯಾದ ಬಳಿಕ ಕಳುಹಿಸುತ್ತೇವೆ ಎಂದು ಹೇಳಿ ಅಲ್ಲೇ ಉಳಿಸಿಕೊಂಡಿದ್ದಾರೆ. ಆದರೆ, ಬೆಂಕಿಯಿಂದ ಪ್ರವಾಸಿಗರು ಸೇರಿದಂತೆ ಯಾರಿಗೂ ತೊಂದರೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ರಸ್ತೆಯಲ್ಲಿ ನಿಂತು ಮುಗಿಲೆತ್ತರಕ್ಕೆ ನೀರು ಚಿಮ್ಮಿಸುವ ಮೂಲಕ ಇಳಿಜಾರಿನ ಗುಡ್ಡದ ಬೆಂಕಿಯನ್ನು ನಂದಿಸಿದ್ದಾರೆ. ಬಿಸಿಲ ಧಗೆಗೆ ಅರಣ್ಯ ಸಂಪೂರ್ಣ ಒಣಗಿ ನಿಂತಿರುವುದರಿಂದ ನೋಡ-ನೋಡುತ್ತಿದ್ದಂತೆ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು, ಪ್ರಾಣಿ-ಪಕ್ಷಿಗಳು ಕೂಡ ಜೀವ ತೆತ್ತಿದ್ದಾವೆ.

– ಅಂತರ್ಜಾಲ ಮಾಹಿತಿ

Advertisement

A forest fire has broken out in the Mullayanagiri Peak of the Chandradrona range of Taluk, which is the highest area of ​​the state and a favorite tourist destination for both domestic and foreign tourists.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ : ಯುವ ಕೃಷಿಕರಿಗೆ ಕೃಷಿ ಬಗ್ಗೆ ಉಪಯುಕ್ತ ಮಾಹಿತಿ

ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ, ಮೂರು ದಿನಗಳ 'ಸುಸ್ಥಿರ ಕೃಷಿ…

2 hours ago

ಕೆರೆಯಲ್ಲಿ ಸಾಕಿದ್ದ 1 ಲಕ್ಷ ಮೀನುಗಳ ಮಾರಣಹೋಮ : 5 ರಿಂದ 10 ಕೆಜಿಯ ಮೀನು ಸಾವಿನಿಂದ 10 ಲಕ್ಷ ನಷ್ಟ

ರೈತ(Farmer) ಎಷ್ಟೇ ಧೈರ್ಯ ಮಾಡಿ ಏನೇ ಮಾಡಿದರು ನಷ್ಟ ಅನ್ನೋದು ಒಂದು ಕಡೆಯಿಂದ…

2 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ – ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮಳೆ

ಈ ಬಾರಿ ಮುಂಗಾರು(Mansoon) ಬೇಗ ಆರಂಭವಾಗುವ ನಿರೀಕ್ಷೆಯಿದೆ. ಬಿರು ಬಿಸಿಲಿನಿಂದ ತತ್ತರಿಸಿದ ಜನತೆಗೆ…

2 hours ago

ಭಾರತ ಚಂದ್ರನಂಗಳದಲ್ಲಿದೆ : ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ : ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ತಾನು ಸತ್ತರು ಪರವಾಗಿಲ್ಲ, ಇನ್ನೊಬ್ಬರು ಬದುಕಬಾರದು ಅನ್ನುವ ಜಾಯಮಾನದ ದೇಶ ಪಾಕಿಸ್ತಾನ(Pakistana). ತನ್ನ…

3 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?

ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…

6 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

6 hours ago