Advertisement
MIRROR FOCUS

ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ ಗುಡ್ಡಕ್ಕೆ ಬೆಂಕಿ | ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ | ಬೆಂಕಿ ನಂದಿಸಲು ಹರಸಾಹಸಪಟ್ಟ ಅಗ್ನಿಶಾಮಕ ಸಿಬ್ಬಂದಿ

Share

ಬೇಸಿಗೆಯ ಉರಿ ಬಿಸಿಲಿನ ತಾಪ ಏರುತ್ತಿದ್ದಂತೆ ಮೊದಲು ಸಮಸ್ಯೆ ಉಂಟಾಗೋದು ಅರಣ್ಯ ಪ್ರದೇಶಗಳಿಗೆ(Forest). ಈ ಸಮಯದಲ್ಲಿ ಕಾಡು ಪ್ರಾಣಿಗಳ(Animals) ಘರ್ಷಣೆಯಿಂದಲೂ ಅಥವಾ ಕಿಡಿಗೇಡಿಗಳು ಹಾಕಿವ ಬೆಂಕಿಯಿಂದಲೂ(Fire) ಕಾಡಿಗೆ ಬೆಂಕಿ ಹೊತ್ತಿಕೊಳ್ಳುತ್ತದೆ. ಇದರಿಂದ ಅಪಾರ ಪ್ರಮಾಣದ ಕಾಡು ಸಂಪತ್ತು, ಪ್ರಾಣಿ, ಪಕ್ಷಿಗಳು ನಾಶವಾಗುತ್ತವೆ. ಇದೀಗ ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವು(Tourism) ಆಗಿರುವ ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಬೆಟ್ಟದಲ್ಲಿ (Mullayanagiri Peak) ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

ಎತ್ತರ ಹಾಗೂ ಇಳಿಜಾರಿನ ಬೆಟ್ಟಕ್ಕೆ ಬೆಂಕಿ ವ್ಯಾಪಿಸಿರುವುದರಿಂದ ಕೆಲ ಸ್ಥಳಕ್ಕೆ ಹೋಗಲು ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗೂ ಸಾಧ್ಯವಾಗುತ್ತಿಲ್ಲ. ಆದರೂ, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲು ಎಂದರೇನೆ ಅಪರೂಪದ ಸಸ್ಯ ಸಂಪತ್ತಿನ ರಾಶಿ. ಬಿಸಿಲಿನ ಝಳಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ ಪರಿಣಾಮ ನೂರಾರು ಎಕರೆ ಅಪರೂಪದ ಸಸ್ಯರಾಶಿ ಕೂಡ ಸುಟ್ಟು ಭಸ್ಮವಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಜೊತೆ ಸ್ಥಳೀಯರು ಕೂಡ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಆದರೆ, ಭಾರೀ ಗಾಳಿಗೆ ಬೆಂಕಿಯ ಜ್ವಾಲೆ ಹರಡುತ್ತಲೇ ಇದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹೋರಾಡುತ್ತಿದ್ದಾರೆ. ಇಂದು ಭಾನುವಾರವಾದ್ದರಿಂದ ನೂರಾರು ಪ್ರವಾಸಿಗರು ಕೂಡ ಮುಳ್ಳಯ್ಯನಗಿರಿಗೆ ಭೇಟಿ ನೀಡಿದ್ದಾರೆ. ಮುಳ್ಳಯ್ಯನಗಿರಿ ಮಾರ್ಗದಲ್ಲೇ ಬೆಂಕಿ ಹೊತ್ತಿರುವುದರಿಂದ ರಸ್ತೆ ಬದಿಯಲ್ಲೂ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಪ್ರವಾಸಿಗರು ಮುಳ್ಳಯ್ಯನಗಿರಿಯಿಂದ ಚಿಕ್ಕಮಗಳೂರಿಗೆ ಬರಲು ಸಾಧ್ಯವಾಗದೇ ಮುಳ್ಳಯ್ಯನಗಿರಿ ಮಾರ್ಗದಲ್ಲೇ ಜಾಮ್ ಆಗಿದ್ದಾರೆ.

ಅರಣ್ಯ ಅಧಿಕಾರಿಗಳು ಬೆಂಕಿಯ ಜ್ವಾಲೆ ಸ್ವಲ್ಪ ಕಡಿಮೆಯಾದ ಬಳಿಕ ಕಳುಹಿಸುತ್ತೇವೆ ಎಂದು ಹೇಳಿ ಅಲ್ಲೇ ಉಳಿಸಿಕೊಂಡಿದ್ದಾರೆ. ಆದರೆ, ಬೆಂಕಿಯಿಂದ ಪ್ರವಾಸಿಗರು ಸೇರಿದಂತೆ ಯಾರಿಗೂ ತೊಂದರೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ರಸ್ತೆಯಲ್ಲಿ ನಿಂತು ಮುಗಿಲೆತ್ತರಕ್ಕೆ ನೀರು ಚಿಮ್ಮಿಸುವ ಮೂಲಕ ಇಳಿಜಾರಿನ ಗುಡ್ಡದ ಬೆಂಕಿಯನ್ನು ನಂದಿಸಿದ್ದಾರೆ. ಬಿಸಿಲ ಧಗೆಗೆ ಅರಣ್ಯ ಸಂಪೂರ್ಣ ಒಣಗಿ ನಿಂತಿರುವುದರಿಂದ ನೋಡ-ನೋಡುತ್ತಿದ್ದಂತೆ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು, ಪ್ರಾಣಿ-ಪಕ್ಷಿಗಳು ಕೂಡ ಜೀವ ತೆತ್ತಿದ್ದಾವೆ.

– ಅಂತರ್ಜಾಲ ಮಾಹಿತಿ

A forest fire has broken out in the Mullayanagiri Peak of the Chandradrona range of Taluk, which is the highest area of ​​the state and a favorite tourist destination for both domestic and foreign tourists.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

8 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

8 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

8 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

12 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago