Advertisement
ಪ್ರಮುಖ

#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

Share

ಭಾರತದ ಸುಂದರ ರಾಜ್ಯವಾದ ಕರ್ನಾಟಕದಲ್ಲಿರುವ ಕುಮಾರ ಪರ್ವತವು ಚಾರಣಿಗರ ಸ್ವರ್ಗವಾಗಿದೆ ಮತ್ತು ಪ್ರಕೃತಿ ಆಸಕ್ತರಿಗೆ ಸ್ವರ್ಗವಾಗಿದೆ. ಪುಷ್ಪಗಿರಿ #Pushpagiri ಎಂದೂ ಕರೆಯಲ್ಪಡುವ ಈ ಭವ್ಯವಾದ ಶಿಖರವು 1,712 ಮೀಟರ್ (5,617 ಅಡಿ) ಎತ್ತರದಲ್ಲಿ ಎತ್ತರದಲ್ಲಿದೆ. ಇದು ಪಶ್ಚಿಮ ಘಟ್ಟಗಳಲ್ಲಿನ #WesternGhats ಎರಡನೇ ಅತಿ ಎತ್ತರದ ಪರ್ವತವಾಗಿದೆ. ಸುಂದರ ಭೂದೃಶ್ಯಗಳು, ಹಚ್ಚ ಹಸಿರಿನ ಮತ್ತು ರೋಮಾಂಚಕ ಹಾದಿಗಳಿಗೆ ಹೆಸರುವಾಸಿಯಾದ ಕುಮಾರ ಪರ್ವತ ಟ್ರೆಕ್, ಪ್ರಕೃತಿಯ ಮಡಿಲಲ್ಲಿ ಮುಳುಗಲು ಬಯಸುವವರಿಗೆ ಮರೆಯಲಾಗದ ಸಾಹಸವನ್ನು ನೀಡುತ್ತದೆ. ಆದರೆ ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳವಾದ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧಿಸಲಾಗಿದೆ.

ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಅಕ್ಟೋಬರ್‌ 3 ರಿಂದ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ #KukkeSubrahmanya ಹಿಂಭಾಗದಲ್ಲಿರುವ ಕುಮಾರ ಪರ್ವತ ಚಾರಣಿಗರ ಫೇವರಿಟ್‌ ತಾಣವೂ ಆಗಿದೆ. ಮಳೆಗಾಲದಲ್ಲಿ ಇಲ್ಲಿಗೆ ಬಹುತೇಕ ನಿರ್ಬಂಧ ವಿಧಿಸಲಾಗಿರುತ್ತದೆ.

ಮತ್ತೆ ನಿರ್ಬಂಧ : ಮೇ ತಿಂಗಳಿನಿಂದ ಸೆಪ್ಟಂಬರ್‌ 29 ರ ತನಕ ಬಿರು ಬೇಸಿಗೆ ಹಾಗೂ ಮಳೆಗಾಲದ ಕಾರಣಕ್ಕಾಗಿ ನಿರ್ಬಂಧ ವಿಧಿಸಲಾಗಿತ್ತು. ಸೆಪ್ಟಂಬರ್‌ 30 ರಂದು ಪ್ರವಾಸಿಗರ ಚಾರಣಕ್ಕೆ ಕುಮಾರ ಪರ್ವ ತೆರೆದುಕೊಂಡಿತ್ತು. ಆದರೆ, ಇದೇ ಬೆನ್ನಿಗೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಆದ್ದರಿಂದ ಅರಣ್ಯ ಇಲಾಖೆ ಚಾರಣಿಗರ ಹಿತದೃಷ್ಟಿಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಿದೆ. ಅಕ್ಟೋಬರ್‌ 3 ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿಷೇಧ ವಿಧಿಸಲಾಗಿದೆ. ಸೆಪ್ಟಂಬರ್‌ 30 ರಂದು ಕುಮಾರ ಪರ್ವತ ಚಾರಣಕ್ಕೆ ಮುಕ್ತವಾಗುತ್ತಲೇ ಮೊದಲ ದಿನವೇ 750 ಮಂದಿ ಪ್ರವಾಸಿಗರು ಆಗಮಿಸಿದ್ದರು. ಅಷ್ಟೇ ಅಲ್ಲ ಮರುದಿನ ಭಾನುವಾರವೂ ಭಾರೀ ಸಂಖ್ಯೆಯ ಪ್ರವಾಸಿಗರು ಚಾರಣಕ್ಕೆ ಆಗಮಿಸಿದ್ದರು ಎಂದು  ಪತ್ರಿಕೆಯೊಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

16 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

21 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

21 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago