ಭಾರತದ ಸುಂದರ ರಾಜ್ಯವಾದ ಕರ್ನಾಟಕದಲ್ಲಿರುವ ಕುಮಾರ ಪರ್ವತವು ಚಾರಣಿಗರ ಸ್ವರ್ಗವಾಗಿದೆ ಮತ್ತು ಪ್ರಕೃತಿ ಆಸಕ್ತರಿಗೆ ಸ್ವರ್ಗವಾಗಿದೆ. ಪುಷ್ಪಗಿರಿ #Pushpagiri ಎಂದೂ ಕರೆಯಲ್ಪಡುವ ಈ ಭವ್ಯವಾದ ಶಿಖರವು 1,712 ಮೀಟರ್ (5,617 ಅಡಿ) ಎತ್ತರದಲ್ಲಿ ಎತ್ತರದಲ್ಲಿದೆ. ಇದು ಪಶ್ಚಿಮ ಘಟ್ಟಗಳಲ್ಲಿನ #WesternGhats ಎರಡನೇ ಅತಿ ಎತ್ತರದ ಪರ್ವತವಾಗಿದೆ. ಸುಂದರ ಭೂದೃಶ್ಯಗಳು, ಹಚ್ಚ ಹಸಿರಿನ ಮತ್ತು ರೋಮಾಂಚಕ ಹಾದಿಗಳಿಗೆ ಹೆಸರುವಾಸಿಯಾದ ಕುಮಾರ ಪರ್ವತ ಟ್ರೆಕ್, ಪ್ರಕೃತಿಯ ಮಡಿಲಲ್ಲಿ ಮುಳುಗಲು ಬಯಸುವವರಿಗೆ ಮರೆಯಲಾಗದ ಸಾಹಸವನ್ನು ನೀಡುತ್ತದೆ. ಆದರೆ ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳವಾದ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧಿಸಲಾಗಿದೆ.
ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಅಕ್ಟೋಬರ್ 3 ರಿಂದ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ #KukkeSubrahmanya ಹಿಂಭಾಗದಲ್ಲಿರುವ ಕುಮಾರ ಪರ್ವತ ಚಾರಣಿಗರ ಫೇವರಿಟ್ ತಾಣವೂ ಆಗಿದೆ. ಮಳೆಗಾಲದಲ್ಲಿ ಇಲ್ಲಿಗೆ ಬಹುತೇಕ ನಿರ್ಬಂಧ ವಿಧಿಸಲಾಗಿರುತ್ತದೆ.
ಮತ್ತೆ ನಿರ್ಬಂಧ : ಮೇ ತಿಂಗಳಿನಿಂದ ಸೆಪ್ಟಂಬರ್ 29 ರ ತನಕ ಬಿರು ಬೇಸಿಗೆ ಹಾಗೂ ಮಳೆಗಾಲದ ಕಾರಣಕ್ಕಾಗಿ ನಿರ್ಬಂಧ ವಿಧಿಸಲಾಗಿತ್ತು. ಸೆಪ್ಟಂಬರ್ 30 ರಂದು ಪ್ರವಾಸಿಗರ ಚಾರಣಕ್ಕೆ ಕುಮಾರ ಪರ್ವ ತೆರೆದುಕೊಂಡಿತ್ತು. ಆದರೆ, ಇದೇ ಬೆನ್ನಿಗೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಆದ್ದರಿಂದ ಅರಣ್ಯ ಇಲಾಖೆ ಚಾರಣಿಗರ ಹಿತದೃಷ್ಟಿಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಿದೆ. ಅಕ್ಟೋಬರ್ 3 ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿಷೇಧ ವಿಧಿಸಲಾಗಿದೆ. ಸೆಪ್ಟಂಬರ್ 30 ರಂದು ಕುಮಾರ ಪರ್ವತ ಚಾರಣಕ್ಕೆ ಮುಕ್ತವಾಗುತ್ತಲೇ ಮೊದಲ ದಿನವೇ 750 ಮಂದಿ ಪ್ರವಾಸಿಗರು ಆಗಮಿಸಿದ್ದರು. ಅಷ್ಟೇ ಅಲ್ಲ ಮರುದಿನ ಭಾನುವಾರವೂ ಭಾರೀ ಸಂಖ್ಯೆಯ ಪ್ರವಾಸಿಗರು ಚಾರಣಕ್ಕೆ ಆಗಮಿಸಿದ್ದರು ಎಂದು ಪತ್ರಿಕೆಯೊಂದು ವರದಿ ಮಾಡಿದೆ.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…