ಪ್ರಮುಖ

#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ಸುಂದರ ರಾಜ್ಯವಾದ ಕರ್ನಾಟಕದಲ್ಲಿರುವ ಕುಮಾರ ಪರ್ವತವು ಚಾರಣಿಗರ ಸ್ವರ್ಗವಾಗಿದೆ ಮತ್ತು ಪ್ರಕೃತಿ ಆಸಕ್ತರಿಗೆ ಸ್ವರ್ಗವಾಗಿದೆ. ಪುಷ್ಪಗಿರಿ #Pushpagiri ಎಂದೂ ಕರೆಯಲ್ಪಡುವ ಈ ಭವ್ಯವಾದ ಶಿಖರವು 1,712 ಮೀಟರ್ (5,617 ಅಡಿ) ಎತ್ತರದಲ್ಲಿ ಎತ್ತರದಲ್ಲಿದೆ. ಇದು ಪಶ್ಚಿಮ ಘಟ್ಟಗಳಲ್ಲಿನ #WesternGhats ಎರಡನೇ ಅತಿ ಎತ್ತರದ ಪರ್ವತವಾಗಿದೆ. ಸುಂದರ ಭೂದೃಶ್ಯಗಳು, ಹಚ್ಚ ಹಸಿರಿನ ಮತ್ತು ರೋಮಾಂಚಕ ಹಾದಿಗಳಿಗೆ ಹೆಸರುವಾಸಿಯಾದ ಕುಮಾರ ಪರ್ವತ ಟ್ರೆಕ್, ಪ್ರಕೃತಿಯ ಮಡಿಲಲ್ಲಿ ಮುಳುಗಲು ಬಯಸುವವರಿಗೆ ಮರೆಯಲಾಗದ ಸಾಹಸವನ್ನು ನೀಡುತ್ತದೆ. ಆದರೆ ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳವಾದ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧಿಸಲಾಗಿದೆ.

Advertisement

ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಅಕ್ಟೋಬರ್‌ 3 ರಿಂದ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ #KukkeSubrahmanya ಹಿಂಭಾಗದಲ್ಲಿರುವ ಕುಮಾರ ಪರ್ವತ ಚಾರಣಿಗರ ಫೇವರಿಟ್‌ ತಾಣವೂ ಆಗಿದೆ. ಮಳೆಗಾಲದಲ್ಲಿ ಇಲ್ಲಿಗೆ ಬಹುತೇಕ ನಿರ್ಬಂಧ ವಿಧಿಸಲಾಗಿರುತ್ತದೆ.

ಮತ್ತೆ ನಿರ್ಬಂಧ : ಮೇ ತಿಂಗಳಿನಿಂದ ಸೆಪ್ಟಂಬರ್‌ 29 ರ ತನಕ ಬಿರು ಬೇಸಿಗೆ ಹಾಗೂ ಮಳೆಗಾಲದ ಕಾರಣಕ್ಕಾಗಿ ನಿರ್ಬಂಧ ವಿಧಿಸಲಾಗಿತ್ತು. ಸೆಪ್ಟಂಬರ್‌ 30 ರಂದು ಪ್ರವಾಸಿಗರ ಚಾರಣಕ್ಕೆ ಕುಮಾರ ಪರ್ವ ತೆರೆದುಕೊಂಡಿತ್ತು. ಆದರೆ, ಇದೇ ಬೆನ್ನಿಗೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಆದ್ದರಿಂದ ಅರಣ್ಯ ಇಲಾಖೆ ಚಾರಣಿಗರ ಹಿತದೃಷ್ಟಿಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಿದೆ. ಅಕ್ಟೋಬರ್‌ 3 ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿಷೇಧ ವಿಧಿಸಲಾಗಿದೆ. ಸೆಪ್ಟಂಬರ್‌ 30 ರಂದು ಕುಮಾರ ಪರ್ವತ ಚಾರಣಕ್ಕೆ ಮುಕ್ತವಾಗುತ್ತಲೇ ಮೊದಲ ದಿನವೇ 750 ಮಂದಿ ಪ್ರವಾಸಿಗರು ಆಗಮಿಸಿದ್ದರು. ಅಷ್ಟೇ ಅಲ್ಲ ಮರುದಿನ ಭಾನುವಾರವೂ ಭಾರೀ ಸಂಖ್ಯೆಯ ಪ್ರವಾಸಿಗರು ಚಾರಣಕ್ಕೆ ಆಗಮಿಸಿದ್ದರು ಎಂದು  ಪತ್ರಿಕೆಯೊಂದು ವರದಿ ಮಾಡಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

4 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

11 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

12 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

20 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

21 hours ago