Advertisement
ಪ್ರಮುಖ

#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

Share

ಭಾರತದ ಸುಂದರ ರಾಜ್ಯವಾದ ಕರ್ನಾಟಕದಲ್ಲಿರುವ ಕುಮಾರ ಪರ್ವತವು ಚಾರಣಿಗರ ಸ್ವರ್ಗವಾಗಿದೆ ಮತ್ತು ಪ್ರಕೃತಿ ಆಸಕ್ತರಿಗೆ ಸ್ವರ್ಗವಾಗಿದೆ. ಪುಷ್ಪಗಿರಿ #Pushpagiri ಎಂದೂ ಕರೆಯಲ್ಪಡುವ ಈ ಭವ್ಯವಾದ ಶಿಖರವು 1,712 ಮೀಟರ್ (5,617 ಅಡಿ) ಎತ್ತರದಲ್ಲಿ ಎತ್ತರದಲ್ಲಿದೆ. ಇದು ಪಶ್ಚಿಮ ಘಟ್ಟಗಳಲ್ಲಿನ #WesternGhats ಎರಡನೇ ಅತಿ ಎತ್ತರದ ಪರ್ವತವಾಗಿದೆ. ಸುಂದರ ಭೂದೃಶ್ಯಗಳು, ಹಚ್ಚ ಹಸಿರಿನ ಮತ್ತು ರೋಮಾಂಚಕ ಹಾದಿಗಳಿಗೆ ಹೆಸರುವಾಸಿಯಾದ ಕುಮಾರ ಪರ್ವತ ಟ್ರೆಕ್, ಪ್ರಕೃತಿಯ ಮಡಿಲಲ್ಲಿ ಮುಳುಗಲು ಬಯಸುವವರಿಗೆ ಮರೆಯಲಾಗದ ಸಾಹಸವನ್ನು ನೀಡುತ್ತದೆ. ಆದರೆ ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳವಾದ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧಿಸಲಾಗಿದೆ.

ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಅಕ್ಟೋಬರ್‌ 3 ರಿಂದ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ #KukkeSubrahmanya ಹಿಂಭಾಗದಲ್ಲಿರುವ ಕುಮಾರ ಪರ್ವತ ಚಾರಣಿಗರ ಫೇವರಿಟ್‌ ತಾಣವೂ ಆಗಿದೆ. ಮಳೆಗಾಲದಲ್ಲಿ ಇಲ್ಲಿಗೆ ಬಹುತೇಕ ನಿರ್ಬಂಧ ವಿಧಿಸಲಾಗಿರುತ್ತದೆ.

ಮತ್ತೆ ನಿರ್ಬಂಧ : ಮೇ ತಿಂಗಳಿನಿಂದ ಸೆಪ್ಟಂಬರ್‌ 29 ರ ತನಕ ಬಿರು ಬೇಸಿಗೆ ಹಾಗೂ ಮಳೆಗಾಲದ ಕಾರಣಕ್ಕಾಗಿ ನಿರ್ಬಂಧ ವಿಧಿಸಲಾಗಿತ್ತು. ಸೆಪ್ಟಂಬರ್‌ 30 ರಂದು ಪ್ರವಾಸಿಗರ ಚಾರಣಕ್ಕೆ ಕುಮಾರ ಪರ್ವ ತೆರೆದುಕೊಂಡಿತ್ತು. ಆದರೆ, ಇದೇ ಬೆನ್ನಿಗೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಆದ್ದರಿಂದ ಅರಣ್ಯ ಇಲಾಖೆ ಚಾರಣಿಗರ ಹಿತದೃಷ್ಟಿಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಿದೆ. ಅಕ್ಟೋಬರ್‌ 3 ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿಷೇಧ ವಿಧಿಸಲಾಗಿದೆ. ಸೆಪ್ಟಂಬರ್‌ 30 ರಂದು ಕುಮಾರ ಪರ್ವತ ಚಾರಣಕ್ಕೆ ಮುಕ್ತವಾಗುತ್ತಲೇ ಮೊದಲ ದಿನವೇ 750 ಮಂದಿ ಪ್ರವಾಸಿಗರು ಆಗಮಿಸಿದ್ದರು. ಅಷ್ಟೇ ಅಲ್ಲ ಮರುದಿನ ಭಾನುವಾರವೂ ಭಾರೀ ಸಂಖ್ಯೆಯ ಪ್ರವಾಸಿಗರು ಚಾರಣಕ್ಕೆ ಆಗಮಿಸಿದ್ದರು ಎಂದು  ಪತ್ರಿಕೆಯೊಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

16 minutes ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 hour ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

9 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

14 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

14 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

1 day ago