Advertisement
ಪ್ರಮುಖ

#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

Share

ಭಾರತದ ಸುಂದರ ರಾಜ್ಯವಾದ ಕರ್ನಾಟಕದಲ್ಲಿರುವ ಕುಮಾರ ಪರ್ವತವು ಚಾರಣಿಗರ ಸ್ವರ್ಗವಾಗಿದೆ ಮತ್ತು ಪ್ರಕೃತಿ ಆಸಕ್ತರಿಗೆ ಸ್ವರ್ಗವಾಗಿದೆ. ಪುಷ್ಪಗಿರಿ #Pushpagiri ಎಂದೂ ಕರೆಯಲ್ಪಡುವ ಈ ಭವ್ಯವಾದ ಶಿಖರವು 1,712 ಮೀಟರ್ (5,617 ಅಡಿ) ಎತ್ತರದಲ್ಲಿ ಎತ್ತರದಲ್ಲಿದೆ. ಇದು ಪಶ್ಚಿಮ ಘಟ್ಟಗಳಲ್ಲಿನ #WesternGhats ಎರಡನೇ ಅತಿ ಎತ್ತರದ ಪರ್ವತವಾಗಿದೆ. ಸುಂದರ ಭೂದೃಶ್ಯಗಳು, ಹಚ್ಚ ಹಸಿರಿನ ಮತ್ತು ರೋಮಾಂಚಕ ಹಾದಿಗಳಿಗೆ ಹೆಸರುವಾಸಿಯಾದ ಕುಮಾರ ಪರ್ವತ ಟ್ರೆಕ್, ಪ್ರಕೃತಿಯ ಮಡಿಲಲ್ಲಿ ಮುಳುಗಲು ಬಯಸುವವರಿಗೆ ಮರೆಯಲಾಗದ ಸಾಹಸವನ್ನು ನೀಡುತ್ತದೆ. ಆದರೆ ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳವಾದ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧಿಸಲಾಗಿದೆ.

ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಅಕ್ಟೋಬರ್‌ 3 ರಿಂದ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ #KukkeSubrahmanya ಹಿಂಭಾಗದಲ್ಲಿರುವ ಕುಮಾರ ಪರ್ವತ ಚಾರಣಿಗರ ಫೇವರಿಟ್‌ ತಾಣವೂ ಆಗಿದೆ. ಮಳೆಗಾಲದಲ್ಲಿ ಇಲ್ಲಿಗೆ ಬಹುತೇಕ ನಿರ್ಬಂಧ ವಿಧಿಸಲಾಗಿರುತ್ತದೆ.

ಮತ್ತೆ ನಿರ್ಬಂಧ : ಮೇ ತಿಂಗಳಿನಿಂದ ಸೆಪ್ಟಂಬರ್‌ 29 ರ ತನಕ ಬಿರು ಬೇಸಿಗೆ ಹಾಗೂ ಮಳೆಗಾಲದ ಕಾರಣಕ್ಕಾಗಿ ನಿರ್ಬಂಧ ವಿಧಿಸಲಾಗಿತ್ತು. ಸೆಪ್ಟಂಬರ್‌ 30 ರಂದು ಪ್ರವಾಸಿಗರ ಚಾರಣಕ್ಕೆ ಕುಮಾರ ಪರ್ವ ತೆರೆದುಕೊಂಡಿತ್ತು. ಆದರೆ, ಇದೇ ಬೆನ್ನಿಗೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಆದ್ದರಿಂದ ಅರಣ್ಯ ಇಲಾಖೆ ಚಾರಣಿಗರ ಹಿತದೃಷ್ಟಿಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಿದೆ. ಅಕ್ಟೋಬರ್‌ 3 ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿಷೇಧ ವಿಧಿಸಲಾಗಿದೆ. ಸೆಪ್ಟಂಬರ್‌ 30 ರಂದು ಕುಮಾರ ಪರ್ವತ ಚಾರಣಕ್ಕೆ ಮುಕ್ತವಾಗುತ್ತಲೇ ಮೊದಲ ದಿನವೇ 750 ಮಂದಿ ಪ್ರವಾಸಿಗರು ಆಗಮಿಸಿದ್ದರು. ಅಷ್ಟೇ ಅಲ್ಲ ಮರುದಿನ ಭಾನುವಾರವೂ ಭಾರೀ ಸಂಖ್ಯೆಯ ಪ್ರವಾಸಿಗರು ಚಾರಣಕ್ಕೆ ಆಗಮಿಸಿದ್ದರು ಎಂದು  ಪತ್ರಿಕೆಯೊಂದು ವರದಿ ಮಾಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 hour ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

8 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

17 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago