Advertisement
ಪ್ರಮುಖ

#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

Share

ಭಾರತದ ಸುಂದರ ರಾಜ್ಯವಾದ ಕರ್ನಾಟಕದಲ್ಲಿರುವ ಕುಮಾರ ಪರ್ವತವು ಚಾರಣಿಗರ ಸ್ವರ್ಗವಾಗಿದೆ ಮತ್ತು ಪ್ರಕೃತಿ ಆಸಕ್ತರಿಗೆ ಸ್ವರ್ಗವಾಗಿದೆ. ಪುಷ್ಪಗಿರಿ #Pushpagiri ಎಂದೂ ಕರೆಯಲ್ಪಡುವ ಈ ಭವ್ಯವಾದ ಶಿಖರವು 1,712 ಮೀಟರ್ (5,617 ಅಡಿ) ಎತ್ತರದಲ್ಲಿ ಎತ್ತರದಲ್ಲಿದೆ. ಇದು ಪಶ್ಚಿಮ ಘಟ್ಟಗಳಲ್ಲಿನ #WesternGhats ಎರಡನೇ ಅತಿ ಎತ್ತರದ ಪರ್ವತವಾಗಿದೆ. ಸುಂದರ ಭೂದೃಶ್ಯಗಳು, ಹಚ್ಚ ಹಸಿರಿನ ಮತ್ತು ರೋಮಾಂಚಕ ಹಾದಿಗಳಿಗೆ ಹೆಸರುವಾಸಿಯಾದ ಕುಮಾರ ಪರ್ವತ ಟ್ರೆಕ್, ಪ್ರಕೃತಿಯ ಮಡಿಲಲ್ಲಿ ಮುಳುಗಲು ಬಯಸುವವರಿಗೆ ಮರೆಯಲಾಗದ ಸಾಹಸವನ್ನು ನೀಡುತ್ತದೆ. ಆದರೆ ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳವಾದ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧಿಸಲಾಗಿದೆ.

ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಅಕ್ಟೋಬರ್‌ 3 ರಿಂದ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ #KukkeSubrahmanya ಹಿಂಭಾಗದಲ್ಲಿರುವ ಕುಮಾರ ಪರ್ವತ ಚಾರಣಿಗರ ಫೇವರಿಟ್‌ ತಾಣವೂ ಆಗಿದೆ. ಮಳೆಗಾಲದಲ್ಲಿ ಇಲ್ಲಿಗೆ ಬಹುತೇಕ ನಿರ್ಬಂಧ ವಿಧಿಸಲಾಗಿರುತ್ತದೆ.

ಮತ್ತೆ ನಿರ್ಬಂಧ : ಮೇ ತಿಂಗಳಿನಿಂದ ಸೆಪ್ಟಂಬರ್‌ 29 ರ ತನಕ ಬಿರು ಬೇಸಿಗೆ ಹಾಗೂ ಮಳೆಗಾಲದ ಕಾರಣಕ್ಕಾಗಿ ನಿರ್ಬಂಧ ವಿಧಿಸಲಾಗಿತ್ತು. ಸೆಪ್ಟಂಬರ್‌ 30 ರಂದು ಪ್ರವಾಸಿಗರ ಚಾರಣಕ್ಕೆ ಕುಮಾರ ಪರ್ವ ತೆರೆದುಕೊಂಡಿತ್ತು. ಆದರೆ, ಇದೇ ಬೆನ್ನಿಗೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಆದ್ದರಿಂದ ಅರಣ್ಯ ಇಲಾಖೆ ಚಾರಣಿಗರ ಹಿತದೃಷ್ಟಿಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಿದೆ. ಅಕ್ಟೋಬರ್‌ 3 ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿಷೇಧ ವಿಧಿಸಲಾಗಿದೆ. ಸೆಪ್ಟಂಬರ್‌ 30 ರಂದು ಕುಮಾರ ಪರ್ವತ ಚಾರಣಕ್ಕೆ ಮುಕ್ತವಾಗುತ್ತಲೇ ಮೊದಲ ದಿನವೇ 750 ಮಂದಿ ಪ್ರವಾಸಿಗರು ಆಗಮಿಸಿದ್ದರು. ಅಷ್ಟೇ ಅಲ್ಲ ಮರುದಿನ ಭಾನುವಾರವೂ ಭಾರೀ ಸಂಖ್ಯೆಯ ಪ್ರವಾಸಿಗರು ಚಾರಣಕ್ಕೆ ಆಗಮಿಸಿದ್ದರು ಎಂದು  ಪತ್ರಿಕೆಯೊಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

4 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

5 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

6 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

20 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

20 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago