Advertisement
ಪ್ರಮುಖ

#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

Share

ಭಾರತದ ಸುಂದರ ರಾಜ್ಯವಾದ ಕರ್ನಾಟಕದಲ್ಲಿರುವ ಕುಮಾರ ಪರ್ವತವು ಚಾರಣಿಗರ ಸ್ವರ್ಗವಾಗಿದೆ ಮತ್ತು ಪ್ರಕೃತಿ ಆಸಕ್ತರಿಗೆ ಸ್ವರ್ಗವಾಗಿದೆ. ಪುಷ್ಪಗಿರಿ #Pushpagiri ಎಂದೂ ಕರೆಯಲ್ಪಡುವ ಈ ಭವ್ಯವಾದ ಶಿಖರವು 1,712 ಮೀಟರ್ (5,617 ಅಡಿ) ಎತ್ತರದಲ್ಲಿ ಎತ್ತರದಲ್ಲಿದೆ. ಇದು ಪಶ್ಚಿಮ ಘಟ್ಟಗಳಲ್ಲಿನ #WesternGhats ಎರಡನೇ ಅತಿ ಎತ್ತರದ ಪರ್ವತವಾಗಿದೆ. ಸುಂದರ ಭೂದೃಶ್ಯಗಳು, ಹಚ್ಚ ಹಸಿರಿನ ಮತ್ತು ರೋಮಾಂಚಕ ಹಾದಿಗಳಿಗೆ ಹೆಸರುವಾಸಿಯಾದ ಕುಮಾರ ಪರ್ವತ ಟ್ರೆಕ್, ಪ್ರಕೃತಿಯ ಮಡಿಲಲ್ಲಿ ಮುಳುಗಲು ಬಯಸುವವರಿಗೆ ಮರೆಯಲಾಗದ ಸಾಹಸವನ್ನು ನೀಡುತ್ತದೆ. ಆದರೆ ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳವಾದ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧಿಸಲಾಗಿದೆ.

Advertisement

ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಅಕ್ಟೋಬರ್‌ 3 ರಿಂದ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ #KukkeSubrahmanya ಹಿಂಭಾಗದಲ್ಲಿರುವ ಕುಮಾರ ಪರ್ವತ ಚಾರಣಿಗರ ಫೇವರಿಟ್‌ ತಾಣವೂ ಆಗಿದೆ. ಮಳೆಗಾಲದಲ್ಲಿ ಇಲ್ಲಿಗೆ ಬಹುತೇಕ ನಿರ್ಬಂಧ ವಿಧಿಸಲಾಗಿರುತ್ತದೆ.

ಮತ್ತೆ ನಿರ್ಬಂಧ : ಮೇ ತಿಂಗಳಿನಿಂದ ಸೆಪ್ಟಂಬರ್‌ 29 ರ ತನಕ ಬಿರು ಬೇಸಿಗೆ ಹಾಗೂ ಮಳೆಗಾಲದ ಕಾರಣಕ್ಕಾಗಿ ನಿರ್ಬಂಧ ವಿಧಿಸಲಾಗಿತ್ತು. ಸೆಪ್ಟಂಬರ್‌ 30 ರಂದು ಪ್ರವಾಸಿಗರ ಚಾರಣಕ್ಕೆ ಕುಮಾರ ಪರ್ವ ತೆರೆದುಕೊಂಡಿತ್ತು. ಆದರೆ, ಇದೇ ಬೆನ್ನಿಗೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಆದ್ದರಿಂದ ಅರಣ್ಯ ಇಲಾಖೆ ಚಾರಣಿಗರ ಹಿತದೃಷ್ಟಿಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಿದೆ. ಅಕ್ಟೋಬರ್‌ 3 ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿಷೇಧ ವಿಧಿಸಲಾಗಿದೆ. ಸೆಪ್ಟಂಬರ್‌ 30 ರಂದು ಕುಮಾರ ಪರ್ವತ ಚಾರಣಕ್ಕೆ ಮುಕ್ತವಾಗುತ್ತಲೇ ಮೊದಲ ದಿನವೇ 750 ಮಂದಿ ಪ್ರವಾಸಿಗರು ಆಗಮಿಸಿದ್ದರು. ಅಷ್ಟೇ ಅಲ್ಲ ಮರುದಿನ ಭಾನುವಾರವೂ ಭಾರೀ ಸಂಖ್ಯೆಯ ಪ್ರವಾಸಿಗರು ಚಾರಣಕ್ಕೆ ಆಗಮಿಸಿದ್ದರು ಎಂದು  ಪತ್ರಿಕೆಯೊಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

12 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

18 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

1 day ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

1 day ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago