ಎಳೆ ಅಡಿಕೆ ದಾಸ್ತಾನು | ಇಬ್ಬರ ಜೀವಕ್ಕೆ ಕುತ್ತು ತಂದ ವಿಷಕಾರಿ ಅನಿಲ |

November 4, 2024
6:13 AM

ಅಡಿಕೆ ದಾಸ್ತಾನು ಮಾಡಿರುವ ಟ್ಯಾಂಕ್‌ಗೆ ಇಳಿದು ಸ್ವಚ್ಛ ಮಾಡುತ್ತಿರುವಾಗ ವಿಷಕಾರಿ ಅನಿಲ ಸೇವಿಸಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.ಅತಿಯಾದ ಮೀಥೇನ್ ಅನಿಲವು ಟ್ಯಾಂಕ್‌ನಲ್ಲಿ ತುಂಬಿ, ಆಮ್ಲಜನಕದ ಕೊರತೆಯನ್ನು ಉಂಟುಮಾಡಿತು ಎಂದು ವರದಿಯಾಗಿದೆ.

ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಅಡಿಕೆ ಕಟಾವು ಮಾಡಿದ ಬಳಿಕ
ದಾಸ್ತಾನು ಮಾಡಿ ಸಂಸ್ಕರಣೆಯ ನಂತರ ಬಾಂಗ್ಲಾದೇಶದಲ್ಲಿ ಅಡಿಕೆ ಮಾರಾಟ ಮಾಡಲಾಗುತ್ತದೆ. ಹೀಗೆ ದಾಸ್ತಾನು ಮಾಡಿರುವ ಅಡಿಕೆಯ ಟ್ಯಾಂಕ್‌ಗೆ ಇಳಿದ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಂದು ದಿನದ ಹಿಂದೆ ಟ್ಯಾಂಕ್‌ನಲ್ಲಿ ಅಡಿಕೆ ದಾಸ್ತಾನು ಮಾಡಲಾಗಿತ್ತು, ಮರುದಿನ ಇನ್ನೊಂದು ಟ್ಯಾಂಕ್‌ ಸ್ವಚ್ಛಗೊಳಿಸಿ ಅಡಿಕೆ ತುಂಬಿದ್ದ ಟ್ಯಾಂಕ್‌ ತೆರೆಯುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು ಎಂದು ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಉಳಿದ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಮಾರು ಎಂಟು ಅಡಿ ಆಳದ ತೊಟ್ಟಿಯಲ್ಲಿ ಅಡಿಕೆ ಶೇಖರಣೆಯಾಗಿದ್ದು, ಅಡಿಕೆಯನ್ನು ಹೊರತೆಗೆಯಲು ಮುಂದಾದಾಗ ಅವಘಡ ಸಂಭವಿಸಿದೆ.ಅಡಿಕೆ ಕೊಳೆತ ತೊಟ್ಟಿಯಲ್ಲಿ ಅತಿಯಾದ ಮೀಥೇನ್ ಅನಿಲವನ್ನು ಉತ್ಪತ್ತಿಯಾಗುತ್ತದೆ. ಇದು ಆಮ್ಲಜನಕದ ಕೊರತೆಗೆ ಕಾರಣವಾಗುತ್ತದೆ. ಇದರಿಂದಾಗಿ ಅಸ್ವಸ್ಥತೆ ಉಂಟಾಗುತ್ತದೆ. ಈ ಹಿಂದೆಯೂ ಇಂತಹ ಘಟನೆಗಳು ನಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror