Advertisement
MIRROR FOCUS

ಎಳೆ ಅಡಿಕೆ ದಾಸ್ತಾನು | ಇಬ್ಬರ ಜೀವಕ್ಕೆ ಕುತ್ತು ತಂದ ವಿಷಕಾರಿ ಅನಿಲ |

Share

ಅಡಿಕೆ ದಾಸ್ತಾನು ಮಾಡಿರುವ ಟ್ಯಾಂಕ್‌ಗೆ ಇಳಿದು ಸ್ವಚ್ಛ ಮಾಡುತ್ತಿರುವಾಗ ವಿಷಕಾರಿ ಅನಿಲ ಸೇವಿಸಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.ಅತಿಯಾದ ಮೀಥೇನ್ ಅನಿಲವು ಟ್ಯಾಂಕ್‌ನಲ್ಲಿ ತುಂಬಿ, ಆಮ್ಲಜನಕದ ಕೊರತೆಯನ್ನು ಉಂಟುಮಾಡಿತು ಎಂದು ವರದಿಯಾಗಿದೆ.

ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಅಡಿಕೆ ಕಟಾವು ಮಾಡಿದ ಬಳಿಕ
ದಾಸ್ತಾನು ಮಾಡಿ ಸಂಸ್ಕರಣೆಯ ನಂತರ ಬಾಂಗ್ಲಾದೇಶದಲ್ಲಿ ಅಡಿಕೆ ಮಾರಾಟ ಮಾಡಲಾಗುತ್ತದೆ. ಹೀಗೆ ದಾಸ್ತಾನು ಮಾಡಿರುವ ಅಡಿಕೆಯ ಟ್ಯಾಂಕ್‌ಗೆ ಇಳಿದ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಂದು ದಿನದ ಹಿಂದೆ ಟ್ಯಾಂಕ್‌ನಲ್ಲಿ ಅಡಿಕೆ ದಾಸ್ತಾನು ಮಾಡಲಾಗಿತ್ತು, ಮರುದಿನ ಇನ್ನೊಂದು ಟ್ಯಾಂಕ್‌ ಸ್ವಚ್ಛಗೊಳಿಸಿ ಅಡಿಕೆ ತುಂಬಿದ್ದ ಟ್ಯಾಂಕ್‌ ತೆರೆಯುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು ಎಂದು ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಉಳಿದ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಮಾರು ಎಂಟು ಅಡಿ ಆಳದ ತೊಟ್ಟಿಯಲ್ಲಿ ಅಡಿಕೆ ಶೇಖರಣೆಯಾಗಿದ್ದು, ಅಡಿಕೆಯನ್ನು ಹೊರತೆಗೆಯಲು ಮುಂದಾದಾಗ ಅವಘಡ ಸಂಭವಿಸಿದೆ.ಅಡಿಕೆ ಕೊಳೆತ ತೊಟ್ಟಿಯಲ್ಲಿ ಅತಿಯಾದ ಮೀಥೇನ್ ಅನಿಲವನ್ನು ಉತ್ಪತ್ತಿಯಾಗುತ್ತದೆ. ಇದು ಆಮ್ಲಜನಕದ ಕೊರತೆಗೆ ಕಾರಣವಾಗುತ್ತದೆ. ಇದರಿಂದಾಗಿ ಅಸ್ವಸ್ಥತೆ ಉಂಟಾಗುತ್ತದೆ. ಈ ಹಿಂದೆಯೂ ಇಂತಹ ಘಟನೆಗಳು ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

4 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

4 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

15 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

15 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

19 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago