ಸುದ್ದಿಗಳು

ಎಂಆರ್‌ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ…! | ಗ್ರಾಹಕರು ದೂರು ನೀಡಿದ್ರೆ ಲೈಸನ್ಸ್ ರದ್ದು?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚೆಗೆ ರಾಜ್ಯದಲ್ಲಿ ನಂದಿನಿ ಹಾಲಿನ(Nandini Milk) ಬೆಲೆ ಜಾಸ್ತಿಯಾಗಿದ್ದು(Price hike) ಗ್ರಾಹಕರನ್ನು(Customer) ಕಂಗೆಡಿಸಿದೆ. ಈ ಮಧ್ಯೆ ಈಗ ಹಾಲು ಮಾರಾಟ ಮಾಡುವವರು ಅವರ ಲಾಭಕ್ಕಾಗಿ 1-2 ರೂಪಾಯಿ ಜಾಸ್ತಿ ದುಡ್ಡು ತೆಗೆದುಕೊಳ್ಳುತ್ತಿರುವುದು ಬೇರೆ ಗ್ರಾಹಕರಿಗೆ ಹೊರೆಯಾಗಿದೆ. ನಂದಿನಿ ಉತ್ಪನ್ನ ಮಾರಾಟ ವರ್ತಕರು ಹಾಲಿನ ಎಂಆರ್‌ಪಿ(MRP) ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ನಂದಿನಿ ಮಾರಾಟ ವರ್ತಕರಿಗೆ ಕೆಎಂಎಫ್ (KMF) ಎಚ್ಚರಿಕೆ ನೀಡಿದೆ.

Advertisement
Advertisement
ಮೊನ್ನೆ ವರಿಗೆ 22 ರೂ. ಇದ್ದ 500 ಎಂಎಲ್ ನಂದಿನಿ ಈಗ 550 ಎಂಎಲ್ ಪ್ಯಾಕೇಟ್ ಆಗಿ 24 ರೂ. ಆಗಿದೆ. ಇದೇ ರೀತಿ ಪ್ರತಿ ಪ್ಯಾಕೇಟ್‌ಗೆ 50 ಎಂಎಲ್ ಅಧಿಕ ಹಾಲು ನೀಡಿ 2 ರೂ. ಹೆಚ್ಚು ಮಾಡಿದೆ. ಇದಕ್ಕೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ನಂದಿನಿ ಹಾಲನ್ನು ಅಧಿಕೃತ ಸ್ಟೋರ್‌ಗಳಲ್ಲಿ ಮಾತ್ರವಲ್ಲದೇ ಇತರ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತದೆ. ಬೆಳಗಿನ ಸಮಯದಲ್ಲಿ ಬಿಟ್ಟು ಉಳಿದ ಸಮಯದಲ್ಲಿ ಕೆಲ ನಂದಿನಿ ಡೀಲರ್ಸ್ಗಳು ಮಾತ್ರವಲ್ಲದೇ ಉಳಿದ ಅನೇಕ ಕಡೆ ಎಂಆರ್‌ಪಿಗಿಂತ ಹೆಚ್ಚಿನ ಬೆಲೆ ಪಡೆಯುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬರುತ್ತಿವೆ.
ಇದಕ್ಕೆ ಕಡಿವಾಣ ಹಾಕಿ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುವುದನ್ನು ನಿಲ್ಲಿಸಲು ಕೆಎಂಎಫ್ ಮುಂದಾಗಿದೆ. ಎಂಆರ್‌ಪಿಗಿಂತ ಹೆಚ್ಚಿನ ಹಣ ಪಡೆಯುವ ಬಗ್ಗೆ ಗ್ರಾಹಕರು ದೂರು ನೀಡಿದರೆ, ಅಂತಹವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಲೈಸೆನ್ಸ್ ರದ್ದು ಮಾಡುವುದಾಗಿ ಕೆಎಂಎಫ್ ಎಚ್ಚರಿಸಿದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

4 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

4 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

4 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

4 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

5 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

5 hours ago