Advertisement
ಸುದ್ದಿಗಳು

ಎಂಆರ್‌ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ…! | ಗ್ರಾಹಕರು ದೂರು ನೀಡಿದ್ರೆ ಲೈಸನ್ಸ್ ರದ್ದು?

Share

ಇತ್ತೀಚೆಗೆ ರಾಜ್ಯದಲ್ಲಿ ನಂದಿನಿ ಹಾಲಿನ(Nandini Milk) ಬೆಲೆ ಜಾಸ್ತಿಯಾಗಿದ್ದು(Price hike) ಗ್ರಾಹಕರನ್ನು(Customer) ಕಂಗೆಡಿಸಿದೆ. ಈ ಮಧ್ಯೆ ಈಗ ಹಾಲು ಮಾರಾಟ ಮಾಡುವವರು ಅವರ ಲಾಭಕ್ಕಾಗಿ 1-2 ರೂಪಾಯಿ ಜಾಸ್ತಿ ದುಡ್ಡು ತೆಗೆದುಕೊಳ್ಳುತ್ತಿರುವುದು ಬೇರೆ ಗ್ರಾಹಕರಿಗೆ ಹೊರೆಯಾಗಿದೆ. ನಂದಿನಿ ಉತ್ಪನ್ನ ಮಾರಾಟ ವರ್ತಕರು ಹಾಲಿನ ಎಂಆರ್‌ಪಿ(MRP) ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ನಂದಿನಿ ಮಾರಾಟ ವರ್ತಕರಿಗೆ ಕೆಎಂಎಫ್ (KMF) ಎಚ್ಚರಿಕೆ ನೀಡಿದೆ.

ಮೊನ್ನೆ ವರಿಗೆ 22 ರೂ. ಇದ್ದ 500 ಎಂಎಲ್ ನಂದಿನಿ ಈಗ 550 ಎಂಎಲ್ ಪ್ಯಾಕೇಟ್ ಆಗಿ 24 ರೂ. ಆಗಿದೆ. ಇದೇ ರೀತಿ ಪ್ರತಿ ಪ್ಯಾಕೇಟ್‌ಗೆ 50 ಎಂಎಲ್ ಅಧಿಕ ಹಾಲು ನೀಡಿ 2 ರೂ. ಹೆಚ್ಚು ಮಾಡಿದೆ. ಇದಕ್ಕೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ನಂದಿನಿ ಹಾಲನ್ನು ಅಧಿಕೃತ ಸ್ಟೋರ್‌ಗಳಲ್ಲಿ ಮಾತ್ರವಲ್ಲದೇ ಇತರ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತದೆ. ಬೆಳಗಿನ ಸಮಯದಲ್ಲಿ ಬಿಟ್ಟು ಉಳಿದ ಸಮಯದಲ್ಲಿ ಕೆಲ ನಂದಿನಿ ಡೀಲರ್ಸ್ಗಳು ಮಾತ್ರವಲ್ಲದೇ ಉಳಿದ ಅನೇಕ ಕಡೆ ಎಂಆರ್‌ಪಿಗಿಂತ ಹೆಚ್ಚಿನ ಬೆಲೆ ಪಡೆಯುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬರುತ್ತಿವೆ.
ಇದಕ್ಕೆ ಕಡಿವಾಣ ಹಾಕಿ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುವುದನ್ನು ನಿಲ್ಲಿಸಲು ಕೆಎಂಎಫ್ ಮುಂದಾಗಿದೆ. ಎಂಆರ್‌ಪಿಗಿಂತ ಹೆಚ್ಚಿನ ಹಣ ಪಡೆಯುವ ಬಗ್ಗೆ ಗ್ರಾಹಕರು ದೂರು ನೀಡಿದರೆ, ಅಂತಹವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಲೈಸೆನ್ಸ್ ರದ್ದು ಮಾಡುವುದಾಗಿ ಕೆಎಂಎಫ್ ಎಚ್ಚರಿಸಿದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

4 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

11 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

19 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

20 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

20 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago