Advertisement
ಸುದ್ದಿಗಳು

ಎಂಆರ್‌ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ…! | ಗ್ರಾಹಕರು ದೂರು ನೀಡಿದ್ರೆ ಲೈಸನ್ಸ್ ರದ್ದು?

Share

ಇತ್ತೀಚೆಗೆ ರಾಜ್ಯದಲ್ಲಿ ನಂದಿನಿ ಹಾಲಿನ(Nandini Milk) ಬೆಲೆ ಜಾಸ್ತಿಯಾಗಿದ್ದು(Price hike) ಗ್ರಾಹಕರನ್ನು(Customer) ಕಂಗೆಡಿಸಿದೆ. ಈ ಮಧ್ಯೆ ಈಗ ಹಾಲು ಮಾರಾಟ ಮಾಡುವವರು ಅವರ ಲಾಭಕ್ಕಾಗಿ 1-2 ರೂಪಾಯಿ ಜಾಸ್ತಿ ದುಡ್ಡು ತೆಗೆದುಕೊಳ್ಳುತ್ತಿರುವುದು ಬೇರೆ ಗ್ರಾಹಕರಿಗೆ ಹೊರೆಯಾಗಿದೆ. ನಂದಿನಿ ಉತ್ಪನ್ನ ಮಾರಾಟ ವರ್ತಕರು ಹಾಲಿನ ಎಂಆರ್‌ಪಿ(MRP) ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ನಂದಿನಿ ಮಾರಾಟ ವರ್ತಕರಿಗೆ ಕೆಎಂಎಫ್ (KMF) ಎಚ್ಚರಿಕೆ ನೀಡಿದೆ.

ಮೊನ್ನೆ ವರಿಗೆ 22 ರೂ. ಇದ್ದ 500 ಎಂಎಲ್ ನಂದಿನಿ ಈಗ 550 ಎಂಎಲ್ ಪ್ಯಾಕೇಟ್ ಆಗಿ 24 ರೂ. ಆಗಿದೆ. ಇದೇ ರೀತಿ ಪ್ರತಿ ಪ್ಯಾಕೇಟ್‌ಗೆ 50 ಎಂಎಲ್ ಅಧಿಕ ಹಾಲು ನೀಡಿ 2 ರೂ. ಹೆಚ್ಚು ಮಾಡಿದೆ. ಇದಕ್ಕೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ನಂದಿನಿ ಹಾಲನ್ನು ಅಧಿಕೃತ ಸ್ಟೋರ್‌ಗಳಲ್ಲಿ ಮಾತ್ರವಲ್ಲದೇ ಇತರ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತದೆ. ಬೆಳಗಿನ ಸಮಯದಲ್ಲಿ ಬಿಟ್ಟು ಉಳಿದ ಸಮಯದಲ್ಲಿ ಕೆಲ ನಂದಿನಿ ಡೀಲರ್ಸ್ಗಳು ಮಾತ್ರವಲ್ಲದೇ ಉಳಿದ ಅನೇಕ ಕಡೆ ಎಂಆರ್‌ಪಿಗಿಂತ ಹೆಚ್ಚಿನ ಬೆಲೆ ಪಡೆಯುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬರುತ್ತಿವೆ.
ಇದಕ್ಕೆ ಕಡಿವಾಣ ಹಾಕಿ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುವುದನ್ನು ನಿಲ್ಲಿಸಲು ಕೆಎಂಎಫ್ ಮುಂದಾಗಿದೆ. ಎಂಆರ್‌ಪಿಗಿಂತ ಹೆಚ್ಚಿನ ಹಣ ಪಡೆಯುವ ಬಗ್ಗೆ ಗ್ರಾಹಕರು ದೂರು ನೀಡಿದರೆ, ಅಂತಹವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಲೈಸೆನ್ಸ್ ರದ್ದು ಮಾಡುವುದಾಗಿ ಕೆಎಂಎಫ್ ಎಚ್ಚರಿಸಿದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

4 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

10 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

10 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

10 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

11 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

11 hours ago