ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು ವಿಭಾಗಗಳಲ್ಲಿ ಅವಕಾಶ ಮಾಡಿಕೊಡಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗಿರಿಮಾರ್ಗದಲ್ಲಿ ಕಳೆದ ಆರು ತಿಂಗಳಲ್ಲಿ ಎರಡೂವರೆ ಲಕ್ಷದಷ್ಟು ವಾಹನಗಳ ಸಂಚಾರ ಕಂಡುಬಂದಿದೆ. ಗಿರಿ ರಸ್ತೆ ಅತ್ಯಂತ ಕಿರಿದಾಗಿರುವುದರಿಂದ ಸಮಸ್ಯೆಯಾಗುತ್ತಿದ್ದು, ಭೂಗರ್ಭ ಶಾಸ್ತ್ರಜ್ಞರು ಭೂಕುಸಿತದ ಬಗ್ಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ 600 ವಾಹನಗಳನ್ನು ಹಾಗೂ ಮಧ್ಯಾಹ್ನ 1 ಗಂಟೆಯಿಂದ ಸಂಜೆ 6 ಗಂಟೆವರೆಗೆ 600 ವಾಹನಗಳನ್ನು ಬಿಡಲು ನಿರ್ಧರಿಸಲಾಗಿದೆ. ಮಧ್ಯಾಹ್ನ ಬಿಡುವು ನೀಡಲಾಗುವ ಒಂದು ಗಂಟೆ ಅವಧಿಯಲ್ಲಿ ಗಿರಿಗೆ ತೆರಳುವ ವಾಹನಗಳು ಮರಳಿ ಬರಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…