ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು ವಿಭಾಗಗಳಲ್ಲಿ ಅವಕಾಶ ಮಾಡಿಕೊಡಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗಿರಿಮಾರ್ಗದಲ್ಲಿ ಕಳೆದ ಆರು ತಿಂಗಳಲ್ಲಿ ಎರಡೂವರೆ ಲಕ್ಷದಷ್ಟು ವಾಹನಗಳ ಸಂಚಾರ ಕಂಡುಬಂದಿದೆ. ಗಿರಿ ರಸ್ತೆ ಅತ್ಯಂತ ಕಿರಿದಾಗಿರುವುದರಿಂದ ಸಮಸ್ಯೆಯಾಗುತ್ತಿದ್ದು, ಭೂಗರ್ಭ ಶಾಸ್ತ್ರಜ್ಞರು ಭೂಕುಸಿತದ ಬಗ್ಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ 600 ವಾಹನಗಳನ್ನು ಹಾಗೂ ಮಧ್ಯಾಹ್ನ 1 ಗಂಟೆಯಿಂದ ಸಂಜೆ 6 ಗಂಟೆವರೆಗೆ 600 ವಾಹನಗಳನ್ನು ಬಿಡಲು ನಿರ್ಧರಿಸಲಾಗಿದೆ. ಮಧ್ಯಾಹ್ನ ಬಿಡುವು ನೀಡಲಾಗುವ ಒಂದು ಗಂಟೆ ಅವಧಿಯಲ್ಲಿ ಗಿರಿಗೆ ತೆರಳುವ ವಾಹನಗಳು ಮರಳಿ ಬರಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…