ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್ ಫೌಂಡೇಶನ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಜೀವನದಿ ಕಾವೇರಿ ಎಂಬ ಸಾಕ್ಷ್ಯಚಿತ್ರದ ಟ್ರೇಲರ್ ಗೆ ಅಂತಾರಾಷ್ಟ್ರೀಯ ವನ್ಯ ಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಸಂಜಯ್ ಗುಬ್ಬಿ, ಚಾಮರಾಜನಗರ ಅರಣ್ಯ ಪ್ರದೇಶದ ಮಲೆಮಹದೇಶ್ವರ ಹಾಗೂ ಕಾವೇರಿ ವನ್ಯಜೀವಿಧಾಮ ಪ್ರಾಣಿಗಳಿಗೆ ಮುಖ್ಯ ಆವಾಸ ಸ್ಥಾನವಾಗಿದೆ. ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಾಕ್ಷ್ಯಚಿತ್ರ ನಿರ್ಮಿಸಲಾಗಿದೆ ಎಂದರು. ಸಾಕ್ಷ್ಯಾಚಿತ್ರವನ್ನು ಸುಮಾರು ನಾಲ್ಕು ವರ್ಷಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು, ಏಷ್ಯಾ ಆನೆಗಳ ಕುರಿತು ಹೆಚ್ಚು ಒತ್ತು ನೀಡಲಾಗಿದೆ. ಇದೊಂದು ವಾಣಿಜ್ಯೇತರ ಸಾಕ್ಷ್ಯಚಿತ್ರವಾಗಿದೆ ಎಂದು ತಿಳಿಸಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…