ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೆ ರೋಡ್ ಘಾಟ್ ವಿಭಾಗದಲ್ಲಿ ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಗುರುವಾರ ಬಂಡೆಯೊಂದು ಉರುಳಿ ಹಳಿ ಮೇಲೆ ಬಿದ್ದ ಘಟನೆ ಸಂಭವಿಸಿದೆ.
ಘಟನೆಯಿಂದ ಬೆಂಗಳೂರು, ಹಾಸನ ಮತ್ತು ಮಂಗಳೂರು ನಡುವಿನ ರೈಲು ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಇಲಾಖೆಯ ತುರ್ತು ಕಾಮಗಾರಿ ನಿರ್ವಹಣಾ ವಿಭಾಗ ಹಳಿಯ ಮೇಲಿದ್ದ ಬಂಡೆಯನ್ನು ತೆರವುಗೊಳಿಸಿದರು.
ಬಂಡೆ ತೆರವುಗೊಳಿಸಿದ ಬಳಿಕ ಮಧ್ಯಾಹ್ನ 12.40ಕ್ಕೆ ರೈಲುಗಳ ಸಂಚಾರ ಪುನರಾರಂಭವಾಗಿದೆ. ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಬಂಡೆ ಬಿದ್ದಿದ್ದ ಪ್ರದೇಶದ ಘಾಟ್ ಸ್ಟ್ರೆಚ್ನಲ್ಲಿರುವ ಟ್ರ್ಯಾಕ್ಗೆ ಯಾವುದೇ ಹಾನಿಯಾಗಿಲ್ಲ ಎಂದು ತುರ್ತು ನಿರ್ವಹಣೆ ವಿಭಾಗದ ತಂಡ ಖಚಿತಪಡಿಸಿದೆ
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…