ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೆ ರೋಡ್ ಘಾಟ್ ವಿಭಾಗದಲ್ಲಿ ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಗುರುವಾರ ಬಂಡೆಯೊಂದು ಉರುಳಿ ಹಳಿ ಮೇಲೆ ಬಿದ್ದ ಘಟನೆ ಸಂಭವಿಸಿದೆ.
ಘಟನೆಯಿಂದ ಬೆಂಗಳೂರು, ಹಾಸನ ಮತ್ತು ಮಂಗಳೂರು ನಡುವಿನ ರೈಲು ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಇಲಾಖೆಯ ತುರ್ತು ಕಾಮಗಾರಿ ನಿರ್ವಹಣಾ ವಿಭಾಗ ಹಳಿಯ ಮೇಲಿದ್ದ ಬಂಡೆಯನ್ನು ತೆರವುಗೊಳಿಸಿದರು.
ಬಂಡೆ ತೆರವುಗೊಳಿಸಿದ ಬಳಿಕ ಮಧ್ಯಾಹ್ನ 12.40ಕ್ಕೆ ರೈಲುಗಳ ಸಂಚಾರ ಪುನರಾರಂಭವಾಗಿದೆ. ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಬಂಡೆ ಬಿದ್ದಿದ್ದ ಪ್ರದೇಶದ ಘಾಟ್ ಸ್ಟ್ರೆಚ್ನಲ್ಲಿರುವ ಟ್ರ್ಯಾಕ್ಗೆ ಯಾವುದೇ ಹಾನಿಯಾಗಿಲ್ಲ ಎಂದು ತುರ್ತು ನಿರ್ವಹಣೆ ವಿಭಾಗದ ತಂಡ ಖಚಿತಪಡಿಸಿದೆ
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…