Advertisement
ಸುದ್ದಿಗಳು

ನೈಸರ್ಗಿಕ ಕೃಷಿ ಕುರಿತ ತರಬೇತಿ ಶಿಬಿರ – 30 ಕೃಷಿ ಸಖಿಯರಿಗೆ ತರಬೇತಿ

Share

ಬೀದರ್‌ ತೋಟಗಾರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ  ನೈಸರ್ಗಿಕ ಕೃಷಿ ಕುರಿತ , 5 ದಿನಗಳ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು.  ಇದೇ ವೇಳೆ ನೈಸರ್ಗಿಕ ಕೃಷಿ ಕುರಿತ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಸಹಯೋಗದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ 30 ಸಂಪನ್ಮೂಲ ವ್ಯಕ್ತಿಗಳಿಗೆ ರಾಸಾಯನಿಕ ರಸಗೊಬ್ಬರ ಬಳಕೆಯಿಂದಾಗುವ ದುಷ್ಪರಿಣಾಮ, ಸಾವಯವಗೊಬ್ಬರ ಬಳಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿ ನೀಡಲಾಯಿತು.

ಬೀದರ್‌ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಈಗಾಗಲೇ ಮೊದಲ ತಂಡದ 30 ಕೃಷಿ ಸಖಿಯರಿಗೆ ನೈಸರ್ಗಿಕ ಕೃಷಿ ಕುರಿತು ತರಬೇತಿ ನೀಡಲಾಗಿದ್ದು, 2ನೇ ತಂಡದ 30 ಕೃಷಿ ಸಖಿಯರಿಗೆ ಕೃಷಿ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಿಂದ ತರಬೇತಿ ನೀಡಲಾಗುವುದು ಎಂದು ತರಬೇತಿ ಆಯೋಜಕರಾದ ಡಾ.ಎಸ್‌.ವಿ ಪಾಟೀಲ ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಆರ್‌. ದೇವಿಕಾ , ನೈಸರ್ಗಿಕ ಕೃಷಿ ಹೆಚ್ಚಿಸುವ ಉದ್ದೇಶದಿಂದ, ಕೇಂದ್ರ ಸರ್ಕಾರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅಡಿ ನೈಸರ್ಗಿಕ ಕೃಷಿ ಅಳವಡಿಸಿಕೊಂಡ ರೈತರಿಗೆ,  ಪ್ರತಿ ವರ್ಷ 4 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದೆ. ಒಂದು ಕೋಟಿ ರೈತರನ್ನು ಇದರ ವ್ಯಾಪ್ತಿಗೆ ತರಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಕೃಷಿ ಸಖಿ ಪ್ರೇಮಲಾ,  ತರಬೇತಿ ಅವಧಿಯಲ್ಲಿ  ನೈಸರ್ಗಿಕ ಕೃಷಿಗೆ ಅಗತ್ಯವಿರುವ ಜೀವಾಮೃತ, ಬೀಜಾಮೃತ, ಘನ ಜೀವಾಮೃತ, ದಶಪರ್ಣಿ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು  ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

13 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

13 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago