ಬೀದರ್ ತೋಟಗಾರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ ನೈಸರ್ಗಿಕ ಕೃಷಿ ಕುರಿತ , 5 ದಿನಗಳ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ನೈಸರ್ಗಿಕ ಕೃಷಿ ಕುರಿತ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಸಹಯೋಗದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ 30 ಸಂಪನ್ಮೂಲ ವ್ಯಕ್ತಿಗಳಿಗೆ ರಾಸಾಯನಿಕ ರಸಗೊಬ್ಬರ ಬಳಕೆಯಿಂದಾಗುವ ದುಷ್ಪರಿಣಾಮ, ಸಾವಯವಗೊಬ್ಬರ ಬಳಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿ ನೀಡಲಾಯಿತು.
ಬೀದರ್ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಈಗಾಗಲೇ ಮೊದಲ ತಂಡದ 30 ಕೃಷಿ ಸಖಿಯರಿಗೆ ನೈಸರ್ಗಿಕ ಕೃಷಿ ಕುರಿತು ತರಬೇತಿ ನೀಡಲಾಗಿದ್ದು, 2ನೇ ತಂಡದ 30 ಕೃಷಿ ಸಖಿಯರಿಗೆ ಕೃಷಿ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಿಂದ ತರಬೇತಿ ನೀಡಲಾಗುವುದು ಎಂದು ತರಬೇತಿ ಆಯೋಜಕರಾದ ಡಾ.ಎಸ್.ವಿ ಪಾಟೀಲ ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕರಾದ ಆರ್. ದೇವಿಕಾ , ನೈಸರ್ಗಿಕ ಕೃಷಿ ಹೆಚ್ಚಿಸುವ ಉದ್ದೇಶದಿಂದ, ಕೇಂದ್ರ ಸರ್ಕಾರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅಡಿ ನೈಸರ್ಗಿಕ ಕೃಷಿ ಅಳವಡಿಸಿಕೊಂಡ ರೈತರಿಗೆ, ಪ್ರತಿ ವರ್ಷ 4 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದೆ. ಒಂದು ಕೋಟಿ ರೈತರನ್ನು ಇದರ ವ್ಯಾಪ್ತಿಗೆ ತರಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಕೃಷಿ ಸಖಿ ಪ್ರೇಮಲಾ, ತರಬೇತಿ ಅವಧಿಯಲ್ಲಿ ನೈಸರ್ಗಿಕ ಕೃಷಿಗೆ ಅಗತ್ಯವಿರುವ ಜೀವಾಮೃತ, ಬೀಜಾಮೃತ, ಘನ ಜೀವಾಮೃತ, ದಶಪರ್ಣಿ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು ಎಂದು ತಿಳಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…