ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ಗುತ್ತಿಗಾರು ಇದರ ವತಿಯಿಂದ ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ ಗ್ರಾಮೀಣ ಭಾಗದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಆಯೋಜಿಸಲಾಗಿದೆ.
ಮಕ್ಕಳಿಗೆ ಕಲಿಕೆ ಜೊತೆಗೆ ಗ್ರಂಥಾಲಯದ ಸದ್ಬಳಕೆ ಕ್ರಿಯಾತ್ಮಕ ಚಟುವಟಿಕೆ ಮುಖಾಂತರ ಬೌದ್ಧಿಕ ಸಾಮರ್ಥ್ಯ ಚಟುವಟಿಗಳು, ಗಣಿತ,ಹಾಗೂ ಭಾಷಾ ವಿಷಯಗಳ ಕುರಿತು ತರಬೇತಿ ಇರುವುದು. ತರಬೇತಿ ಉಚಿತವಾಗಿದೆ. ನೋಂದಣಿ ಶುಲ್ಕ ಇರಿಸಲಾಗಿದ್ದು ಪ್ರತಿ ಆದಿತ್ಯವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತರಗತಿಗಳು ನಡೆಯಲಿದೆ. ಸತತ ನಾಲ್ಕು ವರ್ಷ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಈ ತರಬೇತಿ ಈ ಬಾರಿ ಮಕ್ಕಳಿಗೆ ಪುಸ್ತಕದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಓದುವ ಹವ್ಯಾಸ ಬೆಳೆಸುವುದು ಮತ್ತು ಗ್ರಾಮೀಣ ಪರಿಸರದ ಪ್ರತಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಮೂಡಿಸುವುದಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…