ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ಗುತ್ತಿಗಾರು ಇದರ ವತಿಯಿಂದ ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ ಗ್ರಾಮೀಣ ಭಾಗದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಆಯೋಜಿಸಲಾಗಿದೆ.
ಮಕ್ಕಳಿಗೆ ಕಲಿಕೆ ಜೊತೆಗೆ ಗ್ರಂಥಾಲಯದ ಸದ್ಬಳಕೆ ಕ್ರಿಯಾತ್ಮಕ ಚಟುವಟಿಕೆ ಮುಖಾಂತರ ಬೌದ್ಧಿಕ ಸಾಮರ್ಥ್ಯ ಚಟುವಟಿಗಳು, ಗಣಿತ,ಹಾಗೂ ಭಾಷಾ ವಿಷಯಗಳ ಕುರಿತು ತರಬೇತಿ ಇರುವುದು. ತರಬೇತಿ ಉಚಿತವಾಗಿದೆ. ನೋಂದಣಿ ಶುಲ್ಕ ಇರಿಸಲಾಗಿದ್ದು ಪ್ರತಿ ಆದಿತ್ಯವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತರಗತಿಗಳು ನಡೆಯಲಿದೆ. ಸತತ ನಾಲ್ಕು ವರ್ಷ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಈ ತರಬೇತಿ ಈ ಬಾರಿ ಮಕ್ಕಳಿಗೆ ಪುಸ್ತಕದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಓದುವ ಹವ್ಯಾಸ ಬೆಳೆಸುವುದು ಮತ್ತು ಗ್ರಾಮೀಣ ಪರಿಸರದ ಪ್ರತಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಮೂಡಿಸುವುದಾಗಿದೆ.
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…