Advertisement
ಸುದ್ದಿಗಳು

ಕೃಷಿ ಸಖಿಯರಿಗೆ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತರಬೇತಿ

Share

ಸುಳ್ಯದ ಕೃಷಿ ಸಖಿಯರಿಗೆ ಗೇರು ಸಂಶೋಧನಾ ನಿರ್ದೇಶನಾಲಯ ಮತ್ತು ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯಿಂದ ಗೇರು ಬೆಳೆ ಉತ್ಪಾದನೆ ಮತ್ತು ವೈಜ್ಞಾನಿಕ ಕೊಯ್ಲು ತಂತ್ರಜ್ಞಾನ ಕುರಿತಾದ 3 ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು.
ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ಕೇಂದ್ರ ಕಚೇರಿ ವಿಟ್ಲ, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ ಇವರ ಜಂಟಿ ಸಹಯೋಗದಲ್ಲಿ ಗೇರು ಬೆಳೆ ಉತ್ಪಾದನೆ ಮತ್ತು ವೈಜ್ಞಾನಿಕ ಕೊಯ್ಲು ತಂತ್ರಜ್ಞಾನಗಳ ಬಗ್ಗೆ ಕೃಷಿ ಸಖಿಯರಿಗೆ ಸಾಮರ್ಥ್ಯಾಭಿವೃದ್ಧಿ ಕುರಿತಾದ 3 ದಿನದ ತರಬೇತಿ ಕಾರ್ಯಗಾರವು ಉದ್ಘಾಟನೆಗೊಂಡಿತು.

ದಿನಕರ ಅಡಿಗ ನಿರ್ದೇಶಕರು ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು, ಇವರು ದೀಪ ಪ್ರಜ್ವಲಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಜಯರಾಮ್ ಕೆ. ಇ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು, ಟಿ . ಎನ್ ರವಿಪ್ರಸಾದ್ ಪ್ರಧಾನ ವಿಜ್ಞಾನಿಗಳು ಕೀಟಶಾಸ್ತ್ರ ,ಅಶ್ವತಿ ಚಂದ್ರಕುಮಾರ್ ,ವಿಜ್ಞಾನಿಗಳು ಕೃಷಿ ವಿಸ್ತರಣಾ ವಿಭಾಗ, ಪ್ರಮೋದ್, ಹಿರಿಯ ಸಹಾಯಕ ನಿರ್ದೇಶಕರು ತೋಟಗಾರಿಕಾ ಇಲಾಖೆ ಸುಳ್ಯ, ವಿನೀತ್ ಜಿಲ್ಲಾ ವ್ಯವಸ್ಥಾಪಕರು ಕೃಷಿ ಜೀವನೋಪಾಯ ಜಿಲ್ಲಾ ಪಂಚಾಯತ್ ಮಂಗಳೂರು,  ಶ್ವೇತಾ ಟಿ. ಪಿ. ಎಂ ಎನ್.ಆರ್.ಎಲ್.ಎಂ
ತಾಲ್ಲೂಕು ಪಂಚಾಯತ್ ಸುಳ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾದ  ಭಾಗ್ಯ ವಿಜ್ಞಾನಿಗಳು ತೋಟಗಾರಿಕಾ ವಿಭಾಗ, ಈರದಾಸಪ್ಪ ವಿಜ್ಞಾನಿಗಳು ತಳಿ ಶಾಸ್ತ್ರ ಮತ್ತು ಸಂತಾನೋತ್ಪತ್ತಿ,ಮಂಜುನಾಥ್ ವಿಜ್ಞಾನಿಗಳು ಕೃಷಿ ಯಂತ್ರೋಪಕರಣ ವಿಭಾಗ,ಅರಬಣ್ಣ ಪೂಜಾರಿ ಕಿರಿಯ ತೋಟಗಾರಿಕಾ ನಿರ್ದೇಶಕರು ತೋಟಗಾರಿಕಾ ಇಲಾಖೆ ಸುಳ್ಯ , ತಾಲೂಕಿನ 22 ಕೃಷಿಸಖಿಗಳು ಹಾಜರಿದ್ದರು. ತಾಲೂಕು ಅಭಿಯಾನ ನಿರ್ವಹಣಾ ಘಟಕದ ಎಲ್ಲಾ ಸಿಬ್ಬಂದಿ ಗಳು ಹಾಜರಿದ್ದರು.

ಮೋಹಿನಿ (ನಿಶಾ) ಸಂಪಾಜೆ ಕೃಷಿ ಸಖಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶ್ವೇತ ಟಿ. ಪಿ. ಎಂ  ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

21 minutes ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

46 minutes ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

2 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

5 hours ago