ಸುಳ್ಯದ ಕೃಷಿ ಸಖಿಯರಿಗೆ ಗೇರು ಸಂಶೋಧನಾ ನಿರ್ದೇಶನಾಲಯ ಮತ್ತು ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯಿಂದ ಗೇರು ಬೆಳೆ ಉತ್ಪಾದನೆ ಮತ್ತು ವೈಜ್ಞಾನಿಕ ಕೊಯ್ಲು ತಂತ್ರಜ್ಞಾನ ಕುರಿತಾದ 3 ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು.
ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ಕೇಂದ್ರ ಕಚೇರಿ ವಿಟ್ಲ, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ ಇವರ ಜಂಟಿ ಸಹಯೋಗದಲ್ಲಿ ಗೇರು ಬೆಳೆ ಉತ್ಪಾದನೆ ಮತ್ತು ವೈಜ್ಞಾನಿಕ ಕೊಯ್ಲು ತಂತ್ರಜ್ಞಾನಗಳ ಬಗ್ಗೆ ಕೃಷಿ ಸಖಿಯರಿಗೆ ಸಾಮರ್ಥ್ಯಾಭಿವೃದ್ಧಿ ಕುರಿತಾದ 3 ದಿನದ ತರಬೇತಿ ಕಾರ್ಯಗಾರವು ಉದ್ಘಾಟನೆಗೊಂಡಿತು.
ದಿನಕರ ಅಡಿಗ ನಿರ್ದೇಶಕರು ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು, ಇವರು ದೀಪ ಪ್ರಜ್ವಲಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಜಯರಾಮ್ ಕೆ. ಇ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು, ಟಿ . ಎನ್ ರವಿಪ್ರಸಾದ್ ಪ್ರಧಾನ ವಿಜ್ಞಾನಿಗಳು ಕೀಟಶಾಸ್ತ್ರ ,ಅಶ್ವತಿ ಚಂದ್ರಕುಮಾರ್ ,ವಿಜ್ಞಾನಿಗಳು ಕೃಷಿ ವಿಸ್ತರಣಾ ವಿಭಾಗ, ಪ್ರಮೋದ್, ಹಿರಿಯ ಸಹಾಯಕ ನಿರ್ದೇಶಕರು ತೋಟಗಾರಿಕಾ ಇಲಾಖೆ ಸುಳ್ಯ, ವಿನೀತ್ ಜಿಲ್ಲಾ ವ್ಯವಸ್ಥಾಪಕರು ಕೃಷಿ ಜೀವನೋಪಾಯ ಜಿಲ್ಲಾ ಪಂಚಾಯತ್ ಮಂಗಳೂರು, ಶ್ವೇತಾ ಟಿ. ಪಿ. ಎಂ ಎನ್.ಆರ್.ಎಲ್.ಎಂ
ತಾಲ್ಲೂಕು ಪಂಚಾಯತ್ ಸುಳ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾದ ಭಾಗ್ಯ ವಿಜ್ಞಾನಿಗಳು ತೋಟಗಾರಿಕಾ ವಿಭಾಗ, ಈರದಾಸಪ್ಪ ವಿಜ್ಞಾನಿಗಳು ತಳಿ ಶಾಸ್ತ್ರ ಮತ್ತು ಸಂತಾನೋತ್ಪತ್ತಿ,ಮಂಜುನಾಥ್ ವಿಜ್ಞಾನಿಗಳು ಕೃಷಿ ಯಂತ್ರೋಪಕರಣ ವಿಭಾಗ,ಅರಬಣ್ಣ ಪೂಜಾರಿ ಕಿರಿಯ ತೋಟಗಾರಿಕಾ ನಿರ್ದೇಶಕರು ತೋಟಗಾರಿಕಾ ಇಲಾಖೆ ಸುಳ್ಯ , ತಾಲೂಕಿನ 22 ಕೃಷಿಸಖಿಗಳು ಹಾಜರಿದ್ದರು. ತಾಲೂಕು ಅಭಿಯಾನ ನಿರ್ವಹಣಾ ಘಟಕದ ಎಲ್ಲಾ ಸಿಬ್ಬಂದಿ ಗಳು ಹಾಜರಿದ್ದರು.
ಮೋಹಿನಿ (ನಿಶಾ) ಸಂಪಾಜೆ ಕೃಷಿ ಸಖಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶ್ವೇತ ಟಿ. ಪಿ. ಎಂ ಸ್ವಾಗತಿಸಿದರು.
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…