Advertisement
ಸುದ್ದಿಗಳು

ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |

Share

ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪ್ರವಾಸಿಗರು ವಿವಿಧ ಗಿರಿತಾಣಗಳಿಗೆ ಚಾರಣಕ್ಕಾಗಿ ತಂಡೋಪ ತಂಡವಾಗಿ ಭೇಟಿ ನೀಡುವುದು, ಸಾಹಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಜಿಲ್ಲಾಡಳಿತ ಗಮನಕ್ಕೆ ಬಂದಿರುತ್ತದೆ.

ದ ಕ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಆದ್ದರಿಂದ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಸೂಕ್ತ ಸುರಕ್ಷತಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸೂಚನೆ: ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಅತೀಯಾದ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಸಿಡಿಲು ಬಡಿತ ಮರಬೀಳುವಂತಹ ದುರ್ಘಟನೆಗಳು ನಡೆಯುವ ಸಂಭವವಿರುವುದರಿಂದ ಜಿಲ್ಲೆಯಲ್ಲಿ ಗಿರಿತಾಣ, ಶಿಖರಗಳ ಚಾರಣವನ್ನು  ಚಾರಣಗಳಿಗೆ ಮಳೆಗಾಲದ ಅವಧಿಯಲ್ಲಿ ಹೊಗುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್ ಸಾಹಸ ಚಟುವಟಿಕೆಗಳು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಈ ಆದೇಶದ ಉಲ್ಲಂಘನೆಯು ಡಿನಾನ್ಸರ್ ಮ್ಯಾನೇಜೇಂಟ್ ಕಾಯ್ದೆ 2005 ಸೆಕ್ಷನ್ 51ಬಿ ಮತ್ತು ಸಂಬಂದಿತ ನಿಯಮ/ಕಾಯ್ದೆಗಳ ವಿವಿಧ ಕಲಂಗಳಡಿಯಲ್ಲಿ ದಂಡನೀಯವಾಗಿದೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ.

ಇದರ ಜೊತೆಗೆ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಅದೇಶಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

23 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago