Advertisement
MIRROR FOCUS

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

Share

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌  ಲೋಕಸಭೆಯಲ್ಲಿ ಹೇಳಿದರು.

Advertisement
Advertisement

ಮುಂಗಾರು ಅಧಿವೇಶನಲದ ಪ್ರಶ್ನೋತ್ತರ ಕಲಾಪದಲ್ಲಿ,  ಕೃಷಿಕರಿಗಾಗಿ ಕೃಷಿ ಸಮ್ಮಾನ್‌ ನಿಧಿಯನ್ನು ಆರಂಭಿಸಲಾಗಿದೆ. ಇದರ ಅಡಿಯಲ್ಲಿ,  ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷಕ್ಕೆ  6 ಸಾವಿರ ರೂಪಾಯಿವರೆಗಿನ  ಬೆಂಬಲವನ್ನು ಒದಗಿಸಲಾಗುತ್ತಿದೆ.  ಕೃಷಿಯೋಗ್ಯ ಭೂಮಿಯನ್ನು ಹೊಂದಿರುವ ಎಲ್ಲಾ ಭೂ ಹಿಡುವಳಿ ರೈತ ಕುಟುಂಬಗಳಿಗೆ ಇದು ಅನ್ವಯ ಆಗುತ್ತಿದೆ ಎಂದು ಹೇಳಿದರು. ಈಗಾಗಲೇ 10 ಕೋಟಿಗೂ ಅಧಿಕ ಕೃಷಿಕರು ಈ ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಸಚಿವರು ವಿವರಿಸಿದರು.

ರೈತರಿಗೆ ನೀಡುತ್ತಿರುವ ಸಹಾಯಧನ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ಕೃಷಿಕರಿಗೆ ಸರ್ಕಾರದಿಂದ ಹಲವಾರು ಸಹಾಯ ಧನ ಮತ್ತು ಸಬ್ಸಿಡಿ ಯೋಜನೆಗಳು ಲಭ್ಯ ಇವೆ.  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಕೃಷಿ ಯಾಂತ್ರೀಕರಣ ಯೋಜನೆ, ಸೂಕ್ಷ್ಮ ನೀರಾವರಿ ಯೋಜನೆ ಮತ್ತು ಮೀನುಗಾರಿಕಾ ಇಲಾಖೆಯಿಂದ ಒಳನಾಡು ಮೀನುಗಾರಿಕೆ ರಚಿಸುವ ಪ್ರತಿ ಮೀನು ಸಾಕಾಣಿಕ ಘಟಕಗಳಿಗೆ ಸಹಾಯಧನ ನೀಡಲಾಗುತ್ತಿದೆ ಎಂದರು. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕೃಷಿ ಕ್ಷೇತ್ರವನ್ನು ಕಡೆಗಣಿಸಲಾಗಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು, ಕೃಷಿ ಕ್ಷೇತ್ರದ ಕಲ್ಯಾಣವನ್ನು ಪ್ರಥಮ ಆದ್ಯತೆಯಾಗಿಸಿಕೊಂಡಿದ್ದಾರೆ ಎಂದರು.

ಬರ, ಪ್ರವಾಹ, ಚಂಡಮಾರುತ ಸೇರಿದಂತೆ ವಿವಿಧ ರೀತಿಯ  ನೈಸರ್ಗಿಕ ವಿಕೋಪಗಳಿಂದ ರೈತರ ಬೆಳೆ ನಷ್ಟವನ್ನು ಸರಿದೂಗಿಸಲು ಆರ್ಥಿಕ ನೆರವು ನೀಡುವ ಯೋಜನೆಯನ್ನೂ ಕೇಂದ್ರ ಸರ್ಕಾರ ಜಾರಿಗೊಳಿಸಿದೆ ಎಂದು ಸಚಿವರು ಹೇಳಿದರು . ಕೃಷಿ ಕ್ಷೇತ್ರದಲ್ಲಿ ಸುಸ್ಥಿರ ಉತ್ಪಾದನೆಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಇದೇ ಉದ್ದೇಶಕ್ಕಾಗಿ ಜಾರಿಗೊಳಿಸಲಾಗಿದೆ ಎಂದು ಹೇಳಿದರು.ಇದು ರೈತರ ಬೇಡಿಕೆ ಆಧರಿತ ಯೋಜನೆಯಾಗಿದ್ದು, ಬೆಳೆ ವೈಫಲ್ಯದ ಆರ್ಥಿಕ ನಷ್ಟವನ್ನು ಕಡಿಮೆ ಮಾಡುವ ಮೂಲಕ, ಇದು ರೈತರ ಆದಾಯವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ ಎಂದರು. 2024-25 ರ ಅವಧಿಯಲ್ಲಿ  14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು  ಹೆಚ್ಚಿಸುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ತೆಗೆದುಕೊಂಡಿದ್ದಾರೆ. ಇದು ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ  ಇರುವ ಬದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

5 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

12 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

19 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

19 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

20 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

20 hours ago