#GreenRevolution | ಡಾ. ಎಂ. ಎಸ್.  ಸ್ವಾಮಿನಾಥನ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಾ.. : ಹಸಿವು ನಿವಾರಿಸುವ ಹೆಸರಲ್ಲಿ  ಉಸಿರು ತೆಗೆವ “ಪರಿಹಾರಗಳ ”  ಕುರಿತು.. ಭಾಗ – 1

ಗ್ರಾಮೀಣ ಪ್ರದೇಶದ ಹಸಿವು – ಬಡತನಗಳಿಗೆ ಕಾರಣವಾಗಿದ್ದ  ಭೂಮಾಲೀಕತ್ವ ಹಾಗೂ ಊಳಿಗಮಾನ್ಯ ಪಾಳೇಗಾರಿ ವ್ಯವಸ್ಥಯ ವಿರುದ್ಧ ರೈತಕೂಲಿಗಳ ಬಂಡಾಯದ ಕೆಂಪುಕ್ರಾಂತಿಯನ್ನು ಬಗ್ಗುಬಡಿಯಲು  ಕೂಡ  ಸ್ಥಳೀಯ ಆಳುವವರ್ಗಗಳು ಪಾಶ್ಚಿಮಾತ್ಯ ದೇಶಗಳ ಸಂಪೂರ್ಣ ಕುಮ್ಮಕ್ಕಿನೊಂದಿಗೆ ಹಸಿರುಕ್ರಾಂತಿಯನ್ನು ಬಳಸಿಕೊಂಡರು. ಈ ಹಸಿರುಕ್ರಾಂತಿ ಪವಾಡ ಸದೃಶವೆಂಬಂತೆ ಬೆಳೆಯನ್ನು ಹೆಚ್ಚಿಸಿತು. ಜನರ ಹಸಿವನ್ನು ನೀಗಿಸದಿದ್ದರೂ ದೇಶದ ಆಹಾರ ಉತ್ಪಾದನೆಯನ್ನು ಹೆಚ್ಚಿಸಿತು.