MIRROR FOCUS

ತ್ರಿಪುರಾದಲ್ಲಿ 7 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತಾಳೆ ಬೆಳೆಯುವ ಆಸಕ್ತಿ | ಏಕೆ ತಾಳೆಯತ್ತ ಆಸಕ್ತವಾಗಿವೆ ಈಶಾನ್ಯ ರಾಜ್ಯಗಳು ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತ್ರಿಪುರಾ ಸರ್ಕಾರವು 2026-27 ರ ಹೊತ್ತಿಗೆ ಸುಮಾರು 7 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತಾಳೆ ಕೃಷಿಯನ್ನು ಬೆಳೆಸುವ ಕಡೆಗೆ ಆಸಕ್ತವಾಗಿದೆ. ಇದಕ್ಕಾಗಿ ವಿವಿಧ ಕಂಪನಿಗಳ ಜೊತೆ ಒಪ್ಪಂದವನ್ನೂ ಮಾಡಿಕೊಂಡಿದೆ. ಇದೀಗ ಸರ್ಕಾರವೂ ತಾಳೆ ಕೃಷಿಯತ್ತ‌ ಆಸಕ್ತವಾಗಿದೆ.ಈಗಾಗಲೇ ಈಶಾನ್ಯ ರಾಜ್ಯದಲ್ಲಿ 56.35 ಹೆಕ್ಟೇರ್ ಭೂಮಿಯಲ್ಲಿ ತಾಳೆ ಎಣ್ಣೆ ಗಿಡಗಳನ್ನು ಬೆಳೆಸಲಾಗುತ್ತಿದೆ.

Advertisement

ತ್ರಿಪುರಾದಲ್ಲಿ ತಾಳೆ ಎಣ್ಣೆ ಕೃಷಿಯನ್ನು ವಿಸ್ತರಿಸಲು, ಭಾರತೀಯ ಕೃಷಿ ಸಂಶೋಧನಾ ಮಂಡಳಿ  ಮತ್ತು ಭಾರತೀಯ ತಾಳೆ ಸಂಶೋಧನಾ ಸಂಸ್ಥೆಯಿಂದ 2020 ರಲ್ಲಿ ಡಿಜಿಟಲ್ ಮ್ಯಾಪಿಂಗ್ ಮಾಡಲಾಗಿತ್ತು. ಈ ಪ್ರಕ್ರಿಯೆಯಲ್ಲಿ, ತ್ರಿಪುರಾ ರಾಜ್ಯದಲ್ಲಿ 1,46,364 ಹೆಕ್ಟೇರ್ ಭೂಮಿಯನ್ನು ಗುರುತಿಸಲಾಗಿದೆ. ಅದರಲ್ಲಿ 2026-27ರ ವೇಳೆಗೆ 7000 ಹೆಕ್ಟೇರ್ ಭೂಮಿಯನ್ನು ಪಾಮ್ ಆಯಿಲ್ ಕೃಷಿಗೆ ಒಳಪಡಿಸಲಾಗುವುದು ಎಂದು ಅಲ್ಲಿನ ಕೃಷಿ ಸಚಿವ ರತನ್ ಲಾಲ್ ನಾಥ್ ಹೇಳಿದ್ದಾರೆ. ಇದಕ್ಕಾಗಿ ಕೃಷಿ ಇಲಾಖೆಯು ಗೋದ್ರೇಜ್ ಅಗ್ರೋವೆಟ್ ಲಿಮಿಟೆಡ್ ಮತ್ತು ಪತಂಜಲಿ ಫುಡ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಾಷ್ಟ್ರೀಯ ಖಾದ್ಯ ತೈಲ ಮಿಷನ್ ಅಡಿಯಲ್ಲಿ ಒಪ್ಪಂದಗಳಿಗೆ ಸಹಿ ಕೂಡಾ ಹಾಕಿದೆ ಎಂದು ಅವರು ಹೇಳಿದರು.

ಆಂಧ್ರಪ್ರದೇಶದಿಂದ ಗೋದ್ರೇಜ್ ಅಗ್ರೋವೆಟ್ ಸಹ ತಾಳೆ ಗಿಡಗಳನ್ನು ತಂದು 52.01 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಮಾಡಿದೆ. ಪತಂಜಲಿ ಫುಡ್ ಪ್ರೈವೇಟ್ ಲಿಮಿಟೆಡ್ ಸಹ 56.35 ಹೆಕ್ಟೇರ್‌ನಲ್ಲಿ ತಾಳೆ ಗಿಡಗಳನ್ನು ನೆಟ್ಟಿದೆ. ತ್ರಿಪುರಾ ರಾಜ್ಯವು ತಾಳೆ  ಕೃಷಿಗೆ ಉತ್ತಮ ವಾತಾವರಣ ಹೊಂದಿದೆ ಎಂದು ಸಚಿವರು ಹೇಳಿದ್ದಾರೆ. ತಾಳೆ ಎಣ್ಣೆ ಕೃಷಿಯ ಬಗ್ಗೆ ತರಬೇತಿ ನೀಡಲು ರಾಜ್ಯವು ಈಗಾಗಲೇ 18 ಅಧಿಕಾರಿಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿದೆ ಎಂದು ಸಚಿವರು ಹೇಳಿದರು. ಇಲಾಖೆಯು ಈಗಾಗಲೇ 2123 ರೈತರಿಗೆ ತರಬೇತಿ ನೀಡಿದ್ದು, ಅವರಲ್ಲಿ 1076 ರೈತರು ಉತ್ತಮ ಲಾಭಕ್ಕಾಗಿ ತಾಳೆ ಎಣ್ಣೆ ಗಿಡಗಳನ್ನು ಬೆಳೆಸಲು ಆಸಕ್ತಿ ವ್ಯಕ್ತಪಡಿಸಿದ್ದಾರೆ.

ಗುಡ್ಡಗಾಡು ಪ್ರದೇಶದಲ್ಲಿ ತಾಳೆ ಎಣ್ಣೆ ಬೆಳೆಯುವ ಸಾಮರ್ಥ್ಯವಿರುವುದರಿಂದ ಕೃಷಿ ಇಲಾಖೆ ಈ ಸಾಧ್ಯತೆಯನ್ನು ಅನ್ವೇಷಿಸಿದೆ. ಸದ್ಯಕ್ಕೆ ಕೃಷಿ ಅಭಿವೃದ್ಧಿಗೆ ಹಾಗೂ ಭವಿಷ್ಯದ ದೃಷ್ಟಿಯಿಂದಲೂ ತಾಳೆ ಕೃಷಿಯ ಬಗ್ಗೆ ತ್ರಿಪುರಾ ಸಹಿತ ಈಶಾನ್ಯ ರಾಜ್ಯಗಳು ಆಸಕ್ತವಾಗಿದೆ. ಇದರ ಜೊತೆಗೆ ರಬ್ಬರ್‌ ಬೆಳೆಯತ್ತಲೂ ಮನಸ್ಸು ಮಾಡಿದ್ದವು. ಆದರೆ ತಾಳೆ ಆಹಾರ ಬೆಳೆಯಾಗಿಯೂ ಅಗತ್ಯ ಇರುವುದರಿಂದ ಮತ್ತು ನಾಟಿ ಮಾಡಿದ ನಾಲ್ಕು ವರ್ಷಗಳ ನಂತರ ತಾಳೆ ಮರದಿಂದ ಆದಾಯ ಲಭ್ಯವಾಗುತ್ತದೆ ಮತ್ತು ರೈತರು ಅದರಿಂದ 30 ವರ್ಷಗಳವರೆಗೆ ಆದಾಯ ಪಡೆಯಬಹುದು ಎಂಬುದು ಸರ್ಕಾರ ಯೋಚನೆ.

ಸದ್ಯ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಒಡಿಶಾ, ಕರ್ನಾಟಕ, ಗೋವಾ, ಅಸ್ಸಾಂ, ತ್ರಿಪುರಾ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳು ಪ್ರಮುಖ  ತಾಳೆ ಬೆಳೆಯುವ ರಾಜ್ಯಗಳಾಗಿವೆ. ಇಂಡೋನೇಷ್ಯಾ, ಮಲೇಷ್ಯಾ, ನೈಜೀರಿಯಾ, ಕಾಂಬೋಡಿಯಾ ಮತ್ತು ಥಾಯ್ಲೆಂಡ್‌ನಂತಹ ದೇಶಗಳು ವಿಶ್ವದ ಶೇಕಡಾ 90 ರಷ್ಟು ತಾಳೆ ಎಣ್ಣೆಯನ್ನು ಉತ್ಪಾದಿಸುತ್ತವೆ. ಈಗ ಖಾದ್ಯ ತೈಲಕ್ಕೆ ಪ್ರಪಂಚದಾದ್ಯಂತ ಬೇಡಿಕೆ ಇರುವುದರಿಂದ ಕೃಷಿಯಲ್ಲಿ ತಾಳೆ ಬೆಳೆಯ ಕಡೆಗೆ ತಾಳೆ ಬೆಳೆಗೆ ಸೂಕ್ತವಾದ ವಾತಾವರಣ ಹೊಂದಿರುವ ದೇಶಗಳು ಹೆಚ್ಚು ಆಸಕ್ತವಾಗಿದೆ.

The Tripura government has set a target of bringing 7000 hectares of land under palm oil cultivation by 2026-27 financial year, a senior minister has said. At present, palm oil plants are cultivated in 56.35 hectares of land in the northeastern state.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 minutes ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

10 hours ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

17 hours ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

20 hours ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

21 hours ago