ಅಡಿಕೆ ಧಾರಣೆ ಏಕೆ ಕುಸಿತವಾಗುತ್ತಿದೆ..? | ಬೆಳೆಗಾರರು ಏನು ಮಾಡಬಹುದು ಈಗ ?

December 21, 2023
7:00 PM
ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬಂದಿದೆ. ಮಾರುಕಟ್ಟೆ ಸ್ಥಿರತೆ ಹಾಗೂ ನಿಯಂತ್ರಣಕ್ಕೆ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಆಗಬೇಕಿದೆ.

ಇದುವರೆಗೂ ಅಡಿಕೆ ಧಾರಣೆ 500 ಆಗುತ್ತದೆ, 550 ಆದರೂ ಅಚ್ಚರಿ ಇಲ್ಲ..! ಹೀಗೆನ್ನುತ್ತಾ ಇರುವಾಗ, ಅಡಿಕೆ ಮಾರುಕಟ್ಟೆ ಸ್ಥಿರತೆ ಇಲ್ಲ, ಧಾರಣೆ ಇಳಿಕೆಯಾಗಬಹುದು, ಮಾರುಕಟ್ಟೆ ಎಚ್ಚರ ಇರಲಿ, ವಿಪರೀತ ಹುಚ್ಚು ಮಾರುಕಟ್ಟೆ ಒಳ್ಳೆಯದಲ್ಲ… ಹೀಗೆಲ್ಲಾ ಹೇಳುತ್ತಿದ್ದಾಗ, ಇದೆಲ್ಲಾ ಧಾರಣೆ ಇಳಿಕೆಯ ಆಟ ಎನ್ನುತ್ತಿದ್ದರು ಹಲವಾರು ಮಂದಿ. ಈಗ ಅಡಿಕೆಯ ಅಸಲಿ ಲೆಕ್ಕ ಸಿಕ್ಕಿದೆ. ಅಡಿಕೆ ಮಾರುಕಟ್ಟೆಯಲ್ಲಿ ಇಳಿಕೆ ಕಂಡಿದೆ.

ಅಡಿಕೆ ಧಾರಣೆ ಇಳಿಕೆಗೆ ಕಾರಣ, ಸದ್ದಿಲ್ಲದೆ ವಿದೇಶ ಅಡಿಕೆ ಒಳನುಸುಳುತ್ತಿದೆ. ಭಾರೀ ಎಚ್ಚರಿಕೆಯಲ್ಲಿದ್ದ ಗಡಿ ಭಾಗಗಳೆಲ್ಲವೂ ಮೌನವಾಗಿದೆ.ಈಗ ಅಡಿಕೆ ಮಾರುಕಟ್ಟೆ ಉಳಿಸಿಕೊಳ್ಳಲು ಇನ್ನೂ ಕುಸಿತವಾಗದಂತೆ ಎಚ್ಚರವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಕ್ಯಾಂಪ್ಕೋ ಸಹಿತ ವಿವಿಧ ಸಂಸ್ಥೆಗಳು ಈಗಾಗಲೇ ಇಲಾಖೆಗಳಿಗೆ, ಸರ್ಕಾರವನ್ನು ಎಚ್ಚರಿಸಿದೆ. ಕ್ಯಾಂಪ್ಕೋ ಈ ಬಗ್ಗೆ ಸರ್ಕಾರದ ಗಮನ ಸೆಳೆದಿದೆ. ಅಡಿಕೆ ಬೆಳೆಗಾರರಿಗೆ ಆಗುವ ಸಂಕಷ್ಟದ ಬಗ್ಗೆ ವಿವರವಾಗಿ ಪ್ರಧಾನಿಗಳಿಗೂ ತಿಳಿಸಿದೆ. ಈಗ ಅಡಿಕೆ ಬೆಳೆಯುವ ಪ್ರದೇಶದ ಸಂಸದರೂ , ಶಾಸಕರುಗಳೂ ಧ್ವನಿಗೂಡಿಸಿ ಸರ್ಕಾರದ ಗಮನ ಸೆಳೆಯಬೇಕಿದೆ. ಅಡಿಕೆ ಅಕ್ರಮವಾಗಿ ಆಮದು ತಡೆಗೆ ಕ್ರಮಕ್ಕೆ ಒತ್ತಾಯಿಸಬೇಕಿದೆ.

Advertisement

ಅಡಿಕೆ ಕಳೆದ ವಾರ ಹಳೆ ಚಾಲಿ ಅಡಿಕೆಗೆ 430-435 ರೂಪಾಯಿ ಇದ್ದರೆ ಹೊಸ ಚಾಲಿ ಅಡಿಕೆಗೆ 350-370 ರೂಪಾಯಿವರೆಗೂ ಇತ್ತು. ಇದೀಗ ಹೊಸ ಚಾಲಿ ಅಡಿಕೆ ದರ 350-370 ಆಸುಪಾಸಿನಲ್ಲೇ ಇದ್ದರೆ ಹಳೆ ಚಾಲಿ ಅಡಿಕೆ 405 ರಿಂದ 415 ರೂಪಾಯಿವರೆಗೆ ಇಳಿಕೆಯಾಗಿದೆ. ಖಾಸಗಿ ಮಾರುಕಟ್ಟೆಯಲ್ಲಿ 405-407 ರೂಪಾಯಿಗೆ ಖರೀದಿ ನಡೆದಿದೆ. ಈಗ ಇನ್ನಷ್ಟು ಧಾರಣೆ ಕುಸಿತವಾಗುತ್ತದೆ ಎನ್ನುವ ಭಯದ ವಾತಾವರಣ ಮಾರುಕಟ್ಟೆಯಲ್ಲಿದೆ. ಆದರೆ ಅಂತಹ ಬೇಡಿಕೆ ಕುಸಿತವಾಗಿಲ್ಲ. ಆಮದು ಅಡಿಕೆ ಒಳಬರುತ್ತಿರುವ ಸುದ್ದಿ ಹಾಗೂ ಯಾವುದೇ ತಡೆ ಇಲ್ಲದೇ ಇರುವುದು  ಭಯದ ವಾತಾವರಣಕ್ಕೆ ಕಾರಣವಾಗಿದೆ. ಇದಕ್ಕಾಗಿ ಈಗ ತಕ್ಷಣಕ್ಕೆ ಅಡಿಕೆ ಅಕ್ರಮವಾಗಿ ಆಮದಾಗುವುದಕ್ಕೆ ತಡೆ ಆಗಬೇಕಿದೆ.  ಇದೇ ವೇಳೆ ವಿವಿದಡೆ ಅಡಿಕೆ ದರ ಕ್ವಿಂಟಾಲ್‌ಗೆ ಹೀಗಿದೆ, ಬೆಟ್ಟೆ- 46109-53589, ಗೊರಬಲು- 25079-38599 , ರಾಶಿ- 37159-48359.

ಅಡಿಕೆ ಬೆಳೆಗಾರರು ಕೂಡಾ ಈಗ ಧಾರಣೆ ಕುಸಿತದ ಭೀತಿಯ ಸಂದೇಶದ ಬೆನ್ನಲ್ಲೇ ಸಿಕ್ಕ ಸಿಕ್ಕಲ್ಲಿ ಅಡಿಕೆಯನ್ನು ಮಾರುಕಟ್ಟೆಗೆ ತಳ್ಳಿದರೆ ನಿಶ್ಚಿತವಾಗಿಯೂ ಧಾರಣೆ ಇನ್ನಷ್ಟು ಕುಸಿತವಾಗಬಹುದು. ಸದ್ಯ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ, ಅಡಿಕೆ ಧಾರಣೆಯೂ ಏರಿಕೆ ಸಾಧ್ಯತೆ ಇದೆ. ಚಾಲಿ ಅಡಿಕೆಗೆ 425-430 ರೂಪಾಯಿ ಉಳಿಸಿಕೊಳ್ಳಬಹುದಾಗಿದೆ. ಹೊಸ ಚಾಲಿ ಅಡಿಕೆಗೆ 400+ ಏರಿಕೆ ಆಗಬಹುದಾಗಿದೆ.

Advertisement

ಅಡಿಕೆ ಕಳ್ಳಸಾಗಾಣಿಕೆ ನಿರಾತಂಕವಾಗಿ ಸಾಗಲು ಅಡಿಕೆ ಕಳ್ಳಸಾಗಾಣಿಕೆದಾರರು ಈಚೆಗೆ ತ್ರಿಪುರಾದ ಅಡಿಕೆ ಬೆಳೆಗಾರರನ್ನೂ ಬಳಸಿಕೊಂಡಿದ್ದರು. ತ್ರಿಪುರಾದ ಉತ್ತರ ಜಿಲ್ಲೆಯ ಜಂಪುಯಿ ಹಿಲ್ಸ್‌ನ ಅಡಿಕೆ ಬೆಳೆಗಾರರು ತಮ್ಮ ಅಡಿಕೆ ಬೆಳೆ ಸಾಗಾಣಿಕೆಗೆ ಸೂಕ್ತವಾದ ಅವಕಾಶ ನೀಡಬೇಕು ಎಂದು ಇಲಾಖೆಗಳಿಗೆ ಪತ್ರ ಬರೆದಿದ್ದರು. ಕಳೆದ ಕೆಲವು ಸಮಯಗಳ ಹಿಂದೆಯೂ ಈ ಮಾದರಿಯ ಪ್ರಯತ್ನ ಕಳ್ಳಸಾಗಾಣಿಕೆ ತಂಡದ ಮಾಡಿತ್ತು, ಅದು ವಿಫಲವಾಗಿತ್ತು. ಮೂರು ಲಾರಿಗಳೂ ಈ ಘಟನೆಯನ್ನು ಸುಡಲಾಗಿತ್ತು.

ಈಗ ತ್ರಿಪುರಾದಲ್ಲಿ ಸರಿಯಾದ ಅಡಿಕೆ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಲು ಒತ್ತಾಯಿಸಲಾಗಿದೆ. ದೊಡ್ಡ ಪ್ರಮಾಣದ ಅಕ್ರಮ ಬರ್ಮಾ ಅಡಿಕೆ ಆಮದು ಮತ್ತು ಕೆಲವು ಕಿಡಿಗೇಡಿಗಳು ಅಸ್ಸಾಂನಲ್ಲಿ ಸುಲಿಗೆ ಮಾಡುವುದನ್ನು ತಪ್ಪಿಸುವ ಕಾರಣ ಮುಂದಿಡಲಾಗಿದೆ. ಇದೆಲ್ಲಾ ಸೂಕ್ತ ರೀತಿಯಲ್ಲಿ ಜಾರಿಯಾದರೆ ಅಡಿಕೆ ಅಕ್ರಮ ಆಮದು ತಡೆಗೆ ಸಾಧ್ಯವಿದೆ.

Advertisement

Necessary measures need to be taken to ensure that the Arecanut market does not collapse further.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror