ಕೃಷಿಕ ಸಂಸ್ಥೆ ಟಿಎಸ್ಎಸ್ – TSS (ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್ಎಸ್ TSS ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್ ಜೋಳ ಖರೀದಿಸಲಾಗಿದೆ. ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್ಎಸ್ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…