ಕೃಷಿಕ ಸಂಸ್ಥೆ ಟಿಎಸ್ಎಸ್ – TSS (ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್ಎಸ್ TSS ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್ ಜೋಳ ಖರೀದಿಸಲಾಗಿದೆ. ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್ಎಸ್ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…