ಕೃಷಿಕ ಸಂಸ್ಥೆ ಟಿಎಸ್ಎಸ್ – TSS (ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್ಎಸ್ TSS ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್ ಜೋಳ ಖರೀದಿಸಲಾಗಿದೆ. ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್ಎಸ್ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…