ಸಾವಯವ ಕೃಷಿ ಉತ್ತೇಜನಕ್ಕೆ ಆದ್ಯತೆ | 256 ಒಂಗೋಲ್ ಜಾನುವಾರುಗಳನ್ನು ನೀಡಲಿರುವ ತಿರುಪತಿ ದೇವಸ್ಥಾನ |

January 17, 2022
7:00 AM

ಸಾವಯವ ಕೃಷಿಯನ್ನು ಉತ್ತೇಜಿಸುವ  ಭಾಗವಾಗಿ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾಶಂ ಜಿಲ್ಲೆಯ ರೈತರಿಗೆ ಓಂಗೋಲ್ ತಳಿಯ 256 ಜಾನುವಾರುಗಳನ್ನು ನೀಡಲಿದೆ.

ಆಂದ್ರಪ್ರದೇಶದ  ಚಿರಾಳ, ಕೂರಿಸಪದವು, ಅರ್ಧವೀಡು, ಮುರ್ತೂರು ಮಂಡಲಗಳಿಗೆ  40 ಹಸುಗಳು ಹಾಗೂ ಹೋರಿಗಳನ್ನು ನೀಡಲಾಗಿದೆ. ಉಳಿದ ಜಾನುವಾರುಗಳನ್ನು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ನೀಡಲಾಗುವುದು. ಜಿಲ್ಲೆಯ 56 ಮಂಡಲಗಳ ಪೈಕಿ 45 ಮಂಡಲಗಳ ಸಾವಯವ ಕೃಷಿಕರು  ಅರ್ಜಿ ಸಲ್ಲಿಸಿದ್ದಾರೆ.

ಸಾವಯವ ಕೃಷಿ ಕಾರ್ಯಕ್ರಮದಡಿ ಪ್ರತಿ ರೈತರಿಗೆ ಒಂದು ಹಸು ಅಥವಾ ಜೋಡಿ ಎತ್ತುಗಳ ನ್ನು ಟಿಟಿಡಿ ಮಂಜೂರು ಮಾಡಿದೆ. ಮೊದಲ ಬ್ಯಾಚ್‌ನ ಓಂಗೋಲ್ ತಳಿಯ ಜಾನುವಾರು ಮಂಗಳವಾರ  ಆಗಮಿಸಿದ್ದು ಅದೇ ದಿನ ರೈತರಿಗೆ ವಿತರಿಸಲಾಗಿದೆ. ಉಳಿದ ಗೋವುಗಳನ್ನು ಸದ್ಯವೇ ನೀಡಲಾಗುವುದು ಎಂದು ಝಡ್‌ವಿಎನ್‌ಎಫ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಭಾಷಿಣಿ ಹೇಳಿದರು.

ಪ್ರಸಾದ ತಯಾರಿಕೆಗಾಗಿ, ಟಿಟಿಡಿ ಮಂಡಳಿಯು ಸಾವಯವವಾಗಿ ಬೆಳೆದ 6,000 ಕ್ವಿಂಟಲ್ ಭತ್ತವನ್ನು ಸೂಕ್ತ ಬೆಂಬಲ ಬೆಲೆಯಲ್ಲಿ ಜಿಲ್ಲಾ ಅಧಿಕಾರಿಗಳಿಂದ ಖರೀದಿಸಲು ಒಪ್ಪಿಗೆಯನ್ನು ನೀಡಿದೆ. ಆದುದರಿಂದ 625 ರೈತರು ಝಡ್‌ಬಿಎನ್‌ಎಫ್ ಅಥವಾ ಸಾವಯವ ಕೃಷಿ ಮೂಲಕ ಜಿಲ್ಲೆಯ ಕೃಷಿ ಅಧಿಕಾರಿಗಳ ಬೆಂಬಲದೊಂದಿಗೆ ಬೆಳೆ ಬೆಳೆಯಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror