MIRROR FOCUS

ಸಾವಯವ ಕೃಷಿ ಉತ್ತೇಜನಕ್ಕೆ ಆದ್ಯತೆ | 256 ಒಂಗೋಲ್ ಜಾನುವಾರುಗಳನ್ನು ನೀಡಲಿರುವ ತಿರುಪತಿ ದೇವಸ್ಥಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾವಯವ ಕೃಷಿಯನ್ನು ಉತ್ತೇಜಿಸುವ  ಭಾಗವಾಗಿ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾಶಂ ಜಿಲ್ಲೆಯ ರೈತರಿಗೆ ಓಂಗೋಲ್ ತಳಿಯ 256 ಜಾನುವಾರುಗಳನ್ನು ನೀಡಲಿದೆ.

Advertisement
Advertisement

ಆಂದ್ರಪ್ರದೇಶದ  ಚಿರಾಳ, ಕೂರಿಸಪದವು, ಅರ್ಧವೀಡು, ಮುರ್ತೂರು ಮಂಡಲಗಳಿಗೆ  40 ಹಸುಗಳು ಹಾಗೂ ಹೋರಿಗಳನ್ನು ನೀಡಲಾಗಿದೆ. ಉಳಿದ ಜಾನುವಾರುಗಳನ್ನು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ನೀಡಲಾಗುವುದು. ಜಿಲ್ಲೆಯ 56 ಮಂಡಲಗಳ ಪೈಕಿ 45 ಮಂಡಲಗಳ ಸಾವಯವ ಕೃಷಿಕರು  ಅರ್ಜಿ ಸಲ್ಲಿಸಿದ್ದಾರೆ.

ಸಾವಯವ ಕೃಷಿ ಕಾರ್ಯಕ್ರಮದಡಿ ಪ್ರತಿ ರೈತರಿಗೆ ಒಂದು ಹಸು ಅಥವಾ ಜೋಡಿ ಎತ್ತುಗಳ ನ್ನು ಟಿಟಿಡಿ ಮಂಜೂರು ಮಾಡಿದೆ. ಮೊದಲ ಬ್ಯಾಚ್‌ನ ಓಂಗೋಲ್ ತಳಿಯ ಜಾನುವಾರು ಮಂಗಳವಾರ  ಆಗಮಿಸಿದ್ದು ಅದೇ ದಿನ ರೈತರಿಗೆ ವಿತರಿಸಲಾಗಿದೆ. ಉಳಿದ ಗೋವುಗಳನ್ನು ಸದ್ಯವೇ ನೀಡಲಾಗುವುದು ಎಂದು ಝಡ್‌ವಿಎನ್‌ಎಫ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಭಾಷಿಣಿ ಹೇಳಿದರು.

ಪ್ರಸಾದ ತಯಾರಿಕೆಗಾಗಿ, ಟಿಟಿಡಿ ಮಂಡಳಿಯು ಸಾವಯವವಾಗಿ ಬೆಳೆದ 6,000 ಕ್ವಿಂಟಲ್ ಭತ್ತವನ್ನು ಸೂಕ್ತ ಬೆಂಬಲ ಬೆಲೆಯಲ್ಲಿ ಜಿಲ್ಲಾ ಅಧಿಕಾರಿಗಳಿಂದ ಖರೀದಿಸಲು ಒಪ್ಪಿಗೆಯನ್ನು ನೀಡಿದೆ. ಆದುದರಿಂದ 625 ರೈತರು ಝಡ್‌ಬಿಎನ್‌ಎಫ್ ಅಥವಾ ಸಾವಯವ ಕೃಷಿ ಮೂಲಕ ಜಿಲ್ಲೆಯ ಕೃಷಿ ಅಧಿಕಾರಿಗಳ ಬೆಂಬಲದೊಂದಿಗೆ ಬೆಳೆ ಬೆಳೆಯಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

13 minutes ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

29 minutes ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

53 minutes ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

1 hour ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

9 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

9 hours ago