ಸಾವಯವ ಕೃಷಿಯನ್ನು ಉತ್ತೇಜಿಸುವ ಭಾಗವಾಗಿ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾಶಂ ಜಿಲ್ಲೆಯ ರೈತರಿಗೆ ಓಂಗೋಲ್ ತಳಿಯ 256 ಜಾನುವಾರುಗಳನ್ನು ನೀಡಲಿದೆ.
ಆಂದ್ರಪ್ರದೇಶದ ಚಿರಾಳ, ಕೂರಿಸಪದವು, ಅರ್ಧವೀಡು, ಮುರ್ತೂರು ಮಂಡಲಗಳಿಗೆ 40 ಹಸುಗಳು ಹಾಗೂ ಹೋರಿಗಳನ್ನು ನೀಡಲಾಗಿದೆ. ಉಳಿದ ಜಾನುವಾರುಗಳನ್ನು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ನೀಡಲಾಗುವುದು. ಜಿಲ್ಲೆಯ 56 ಮಂಡಲಗಳ ಪೈಕಿ 45 ಮಂಡಲಗಳ ಸಾವಯವ ಕೃಷಿಕರು ಅರ್ಜಿ ಸಲ್ಲಿಸಿದ್ದಾರೆ.
ಸಾವಯವ ಕೃಷಿ ಕಾರ್ಯಕ್ರಮದಡಿ ಪ್ರತಿ ರೈತರಿಗೆ ಒಂದು ಹಸು ಅಥವಾ ಜೋಡಿ ಎತ್ತುಗಳ ನ್ನು ಟಿಟಿಡಿ ಮಂಜೂರು ಮಾಡಿದೆ. ಮೊದಲ ಬ್ಯಾಚ್ನ ಓಂಗೋಲ್ ತಳಿಯ ಜಾನುವಾರು ಮಂಗಳವಾರ ಆಗಮಿಸಿದ್ದು ಅದೇ ದಿನ ರೈತರಿಗೆ ವಿತರಿಸಲಾಗಿದೆ. ಉಳಿದ ಗೋವುಗಳನ್ನು ಸದ್ಯವೇ ನೀಡಲಾಗುವುದು ಎಂದು ಝಡ್ವಿಎನ್ಎಫ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಭಾಷಿಣಿ ಹೇಳಿದರು.
ಪ್ರಸಾದ ತಯಾರಿಕೆಗಾಗಿ, ಟಿಟಿಡಿ ಮಂಡಳಿಯು ಸಾವಯವವಾಗಿ ಬೆಳೆದ 6,000 ಕ್ವಿಂಟಲ್ ಭತ್ತವನ್ನು ಸೂಕ್ತ ಬೆಂಬಲ ಬೆಲೆಯಲ್ಲಿ ಜಿಲ್ಲಾ ಅಧಿಕಾರಿಗಳಿಂದ ಖರೀದಿಸಲು ಒಪ್ಪಿಗೆಯನ್ನು ನೀಡಿದೆ. ಆದುದರಿಂದ 625 ರೈತರು ಝಡ್ಬಿಎನ್ಎಫ್ ಅಥವಾ ಸಾವಯವ ಕೃಷಿ ಮೂಲಕ ಜಿಲ್ಲೆಯ ಕೃಷಿ ಅಧಿಕಾರಿಗಳ ಬೆಂಬಲದೊಂದಿಗೆ ಬೆಳೆ ಬೆಳೆಯಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…