Advertisement
MIRROR FOCUS

ಸಾವಯವ ಕೃಷಿ ಉತ್ತೇಜನಕ್ಕೆ ಆದ್ಯತೆ | 256 ಒಂಗೋಲ್ ಜಾನುವಾರುಗಳನ್ನು ನೀಡಲಿರುವ ತಿರುಪತಿ ದೇವಸ್ಥಾನ |

Share

ಸಾವಯವ ಕೃಷಿಯನ್ನು ಉತ್ತೇಜಿಸುವ  ಭಾಗವಾಗಿ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾಶಂ ಜಿಲ್ಲೆಯ ರೈತರಿಗೆ ಓಂಗೋಲ್ ತಳಿಯ 256 ಜಾನುವಾರುಗಳನ್ನು ನೀಡಲಿದೆ.

ಆಂದ್ರಪ್ರದೇಶದ  ಚಿರಾಳ, ಕೂರಿಸಪದವು, ಅರ್ಧವೀಡು, ಮುರ್ತೂರು ಮಂಡಲಗಳಿಗೆ  40 ಹಸುಗಳು ಹಾಗೂ ಹೋರಿಗಳನ್ನು ನೀಡಲಾಗಿದೆ. ಉಳಿದ ಜಾನುವಾರುಗಳನ್ನು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ನೀಡಲಾಗುವುದು. ಜಿಲ್ಲೆಯ 56 ಮಂಡಲಗಳ ಪೈಕಿ 45 ಮಂಡಲಗಳ ಸಾವಯವ ಕೃಷಿಕರು  ಅರ್ಜಿ ಸಲ್ಲಿಸಿದ್ದಾರೆ.

ಸಾವಯವ ಕೃಷಿ ಕಾರ್ಯಕ್ರಮದಡಿ ಪ್ರತಿ ರೈತರಿಗೆ ಒಂದು ಹಸು ಅಥವಾ ಜೋಡಿ ಎತ್ತುಗಳ ನ್ನು ಟಿಟಿಡಿ ಮಂಜೂರು ಮಾಡಿದೆ. ಮೊದಲ ಬ್ಯಾಚ್‌ನ ಓಂಗೋಲ್ ತಳಿಯ ಜಾನುವಾರು ಮಂಗಳವಾರ  ಆಗಮಿಸಿದ್ದು ಅದೇ ದಿನ ರೈತರಿಗೆ ವಿತರಿಸಲಾಗಿದೆ. ಉಳಿದ ಗೋವುಗಳನ್ನು ಸದ್ಯವೇ ನೀಡಲಾಗುವುದು ಎಂದು ಝಡ್‌ವಿಎನ್‌ಎಫ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಭಾಷಿಣಿ ಹೇಳಿದರು.

ಪ್ರಸಾದ ತಯಾರಿಕೆಗಾಗಿ, ಟಿಟಿಡಿ ಮಂಡಳಿಯು ಸಾವಯವವಾಗಿ ಬೆಳೆದ 6,000 ಕ್ವಿಂಟಲ್ ಭತ್ತವನ್ನು ಸೂಕ್ತ ಬೆಂಬಲ ಬೆಲೆಯಲ್ಲಿ ಜಿಲ್ಲಾ ಅಧಿಕಾರಿಗಳಿಂದ ಖರೀದಿಸಲು ಒಪ್ಪಿಗೆಯನ್ನು ನೀಡಿದೆ. ಆದುದರಿಂದ 625 ರೈತರು ಝಡ್‌ಬಿಎನ್‌ಎಫ್ ಅಥವಾ ಸಾವಯವ ಕೃಷಿ ಮೂಲಕ ಜಿಲ್ಲೆಯ ಕೃಷಿ ಅಧಿಕಾರಿಗಳ ಬೆಂಬಲದೊಂದಿಗೆ ಬೆಳೆ ಬೆಳೆಯಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

5 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

6 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

13 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

14 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

23 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

24 hours ago