ಸಾವಯವ ಕೃಷಿಯನ್ನು ಉತ್ತೇಜಿಸುವ ಭಾಗವಾಗಿ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾಶಂ ಜಿಲ್ಲೆಯ ರೈತರಿಗೆ ಓಂಗೋಲ್ ತಳಿಯ 256 ಜಾನುವಾರುಗಳನ್ನು ನೀಡಲಿದೆ.
ಆಂದ್ರಪ್ರದೇಶದ ಚಿರಾಳ, ಕೂರಿಸಪದವು, ಅರ್ಧವೀಡು, ಮುರ್ತೂರು ಮಂಡಲಗಳಿಗೆ 40 ಹಸುಗಳು ಹಾಗೂ ಹೋರಿಗಳನ್ನು ನೀಡಲಾಗಿದೆ. ಉಳಿದ ಜಾನುವಾರುಗಳನ್ನು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ನೀಡಲಾಗುವುದು. ಜಿಲ್ಲೆಯ 56 ಮಂಡಲಗಳ ಪೈಕಿ 45 ಮಂಡಲಗಳ ಸಾವಯವ ಕೃಷಿಕರು ಅರ್ಜಿ ಸಲ್ಲಿಸಿದ್ದಾರೆ.
ಸಾವಯವ ಕೃಷಿ ಕಾರ್ಯಕ್ರಮದಡಿ ಪ್ರತಿ ರೈತರಿಗೆ ಒಂದು ಹಸು ಅಥವಾ ಜೋಡಿ ಎತ್ತುಗಳ ನ್ನು ಟಿಟಿಡಿ ಮಂಜೂರು ಮಾಡಿದೆ. ಮೊದಲ ಬ್ಯಾಚ್ನ ಓಂಗೋಲ್ ತಳಿಯ ಜಾನುವಾರು ಮಂಗಳವಾರ ಆಗಮಿಸಿದ್ದು ಅದೇ ದಿನ ರೈತರಿಗೆ ವಿತರಿಸಲಾಗಿದೆ. ಉಳಿದ ಗೋವುಗಳನ್ನು ಸದ್ಯವೇ ನೀಡಲಾಗುವುದು ಎಂದು ಝಡ್ವಿಎನ್ಎಫ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಭಾಷಿಣಿ ಹೇಳಿದರು.
ಪ್ರಸಾದ ತಯಾರಿಕೆಗಾಗಿ, ಟಿಟಿಡಿ ಮಂಡಳಿಯು ಸಾವಯವವಾಗಿ ಬೆಳೆದ 6,000 ಕ್ವಿಂಟಲ್ ಭತ್ತವನ್ನು ಸೂಕ್ತ ಬೆಂಬಲ ಬೆಲೆಯಲ್ಲಿ ಜಿಲ್ಲಾ ಅಧಿಕಾರಿಗಳಿಂದ ಖರೀದಿಸಲು ಒಪ್ಪಿಗೆಯನ್ನು ನೀಡಿದೆ. ಆದುದರಿಂದ 625 ರೈತರು ಝಡ್ಬಿಎನ್ಎಫ್ ಅಥವಾ ಸಾವಯವ ಕೃಷಿ ಮೂಲಕ ಜಿಲ್ಲೆಯ ಕೃಷಿ ಅಧಿಕಾರಿಗಳ ಬೆಂಬಲದೊಂದಿಗೆ ಬೆಳೆ ಬೆಳೆಯಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…