ಸಾವಯವ ಕೃಷಿಯನ್ನು ಉತ್ತೇಜಿಸುವ ಭಾಗವಾಗಿ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾಶಂ ಜಿಲ್ಲೆಯ ರೈತರಿಗೆ ಓಂಗೋಲ್ ತಳಿಯ 256 ಜಾನುವಾರುಗಳನ್ನು ನೀಡಲಿದೆ.
ಆಂದ್ರಪ್ರದೇಶದ ಚಿರಾಳ, ಕೂರಿಸಪದವು, ಅರ್ಧವೀಡು, ಮುರ್ತೂರು ಮಂಡಲಗಳಿಗೆ 40 ಹಸುಗಳು ಹಾಗೂ ಹೋರಿಗಳನ್ನು ನೀಡಲಾಗಿದೆ. ಉಳಿದ ಜಾನುವಾರುಗಳನ್ನು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ನೀಡಲಾಗುವುದು. ಜಿಲ್ಲೆಯ 56 ಮಂಡಲಗಳ ಪೈಕಿ 45 ಮಂಡಲಗಳ ಸಾವಯವ ಕೃಷಿಕರು ಅರ್ಜಿ ಸಲ್ಲಿಸಿದ್ದಾರೆ.
ಸಾವಯವ ಕೃಷಿ ಕಾರ್ಯಕ್ರಮದಡಿ ಪ್ರತಿ ರೈತರಿಗೆ ಒಂದು ಹಸು ಅಥವಾ ಜೋಡಿ ಎತ್ತುಗಳ ನ್ನು ಟಿಟಿಡಿ ಮಂಜೂರು ಮಾಡಿದೆ. ಮೊದಲ ಬ್ಯಾಚ್ನ ಓಂಗೋಲ್ ತಳಿಯ ಜಾನುವಾರು ಮಂಗಳವಾರ ಆಗಮಿಸಿದ್ದು ಅದೇ ದಿನ ರೈತರಿಗೆ ವಿತರಿಸಲಾಗಿದೆ. ಉಳಿದ ಗೋವುಗಳನ್ನು ಸದ್ಯವೇ ನೀಡಲಾಗುವುದು ಎಂದು ಝಡ್ವಿಎನ್ಎಫ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಭಾಷಿಣಿ ಹೇಳಿದರು.
ಪ್ರಸಾದ ತಯಾರಿಕೆಗಾಗಿ, ಟಿಟಿಡಿ ಮಂಡಳಿಯು ಸಾವಯವವಾಗಿ ಬೆಳೆದ 6,000 ಕ್ವಿಂಟಲ್ ಭತ್ತವನ್ನು ಸೂಕ್ತ ಬೆಂಬಲ ಬೆಲೆಯಲ್ಲಿ ಜಿಲ್ಲಾ ಅಧಿಕಾರಿಗಳಿಂದ ಖರೀದಿಸಲು ಒಪ್ಪಿಗೆಯನ್ನು ನೀಡಿದೆ. ಆದುದರಿಂದ 625 ರೈತರು ಝಡ್ಬಿಎನ್ಎಫ್ ಅಥವಾ ಸಾವಯವ ಕೃಷಿ ಮೂಲಕ ಜಿಲ್ಲೆಯ ಕೃಷಿ ಅಧಿಕಾರಿಗಳ ಬೆಂಬಲದೊಂದಿಗೆ ಬೆಳೆ ಬೆಳೆಯಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…