ಸಾವಯವ ಕೃಷಿಯನ್ನು ಉತ್ತೇಜಿಸುವ ಭಾಗವಾಗಿ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾಶಂ ಜಿಲ್ಲೆಯ ರೈತರಿಗೆ ಓಂಗೋಲ್ ತಳಿಯ 256 ಜಾನುವಾರುಗಳನ್ನು ನೀಡಲಿದೆ.
ಆಂದ್ರಪ್ರದೇಶದ ಚಿರಾಳ, ಕೂರಿಸಪದವು, ಅರ್ಧವೀಡು, ಮುರ್ತೂರು ಮಂಡಲಗಳಿಗೆ 40 ಹಸುಗಳು ಹಾಗೂ ಹೋರಿಗಳನ್ನು ನೀಡಲಾಗಿದೆ. ಉಳಿದ ಜಾನುವಾರುಗಳನ್ನು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ನೀಡಲಾಗುವುದು. ಜಿಲ್ಲೆಯ 56 ಮಂಡಲಗಳ ಪೈಕಿ 45 ಮಂಡಲಗಳ ಸಾವಯವ ಕೃಷಿಕರು ಅರ್ಜಿ ಸಲ್ಲಿಸಿದ್ದಾರೆ.
ಸಾವಯವ ಕೃಷಿ ಕಾರ್ಯಕ್ರಮದಡಿ ಪ್ರತಿ ರೈತರಿಗೆ ಒಂದು ಹಸು ಅಥವಾ ಜೋಡಿ ಎತ್ತುಗಳ ನ್ನು ಟಿಟಿಡಿ ಮಂಜೂರು ಮಾಡಿದೆ. ಮೊದಲ ಬ್ಯಾಚ್ನ ಓಂಗೋಲ್ ತಳಿಯ ಜಾನುವಾರು ಮಂಗಳವಾರ ಆಗಮಿಸಿದ್ದು ಅದೇ ದಿನ ರೈತರಿಗೆ ವಿತರಿಸಲಾಗಿದೆ. ಉಳಿದ ಗೋವುಗಳನ್ನು ಸದ್ಯವೇ ನೀಡಲಾಗುವುದು ಎಂದು ಝಡ್ವಿಎನ್ಎಫ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಭಾಷಿಣಿ ಹೇಳಿದರು.
ಪ್ರಸಾದ ತಯಾರಿಕೆಗಾಗಿ, ಟಿಟಿಡಿ ಮಂಡಳಿಯು ಸಾವಯವವಾಗಿ ಬೆಳೆದ 6,000 ಕ್ವಿಂಟಲ್ ಭತ್ತವನ್ನು ಸೂಕ್ತ ಬೆಂಬಲ ಬೆಲೆಯಲ್ಲಿ ಜಿಲ್ಲಾ ಅಧಿಕಾರಿಗಳಿಂದ ಖರೀದಿಸಲು ಒಪ್ಪಿಗೆಯನ್ನು ನೀಡಿದೆ. ಆದುದರಿಂದ 625 ರೈತರು ಝಡ್ಬಿಎನ್ಎಫ್ ಅಥವಾ ಸಾವಯವ ಕೃಷಿ ಮೂಲಕ ಜಿಲ್ಲೆಯ ಕೃಷಿ ಅಧಿಕಾರಿಗಳ ಬೆಂಬಲದೊಂದಿಗೆ ಬೆಳೆ ಬೆಳೆಯಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…