Advertisement
ಸುದ್ದಿಗಳು

ಜ.4 ರಿಂದ ಮಂಗಳೂರಿನಲ್ಲಿ ಗೆಡ್ಡೆಗೆಣಸು-ಸೊಪ್ಪಿನ ಮೇಳ

Share

ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಜ. 4 ಮತ್ತು 5 ರಂದು ಮಂಗಳೂರಿನ ಸಂಘ ನಿಕೇತನದಲ್ಲಿ ಗಡ್ಡೆ ಗೆಣಸು ಮತ್ತು ಸೊಪ್ಪಿನ ಮೇಳ ಆಯೋಜಿಸಲಾಗಿದೆ.

Advertisement

ಜ. 4 ರಂದು ಬೆಳಗ್ಗೆ 9.30ಕ್ಕೆ ಕೊಂಡೆವೂರು ಶ್ರೀ ಯೊಗಾನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಮೇಯರ್ ಮನೋಜ್ ಕುಮಾರ್, ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಾವಯವ ಕೃಷಿಕ ಗ್ರಾಹಕ ಬಳಗದ ಕಾರ್ಯಾಧ್ಯಕ್ಷ ಜಿ.ಆರ್. ಪ್ರಸಾದ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೇಳದಲ್ಲಿ 350 ಕ್ಕೂ ಅಧಿಕ ವಿಧದ ಗಡ್ಡೆ ಗೆಣಸು ಹಾಗೂ 150 ವಿಧದ ಸೊಪ್ಪುಗಳು ಪ್ರದರ್ಶನಗೊಳ್ಳಲಿವೆ. ಬೆಳಗ್ಗೆ 9 ರಿಂದ ಸಂಜೆ 7 ರವೆಗೆ ನಡೆಯುವ ಮೇಳದಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲದೆ, ಮಹಾರಾಷ್ಟ್ರ, ಒರಿಸ್ಸಾ, ಆಂಧ್ರ ಪ್ರದೇಶ, ಕೇರಳ ರಾಜ್ಯಗಳ ರೈತರು ಭಾಗವಹಿಸಲಿದ್ದಾರೆ ಎಂದರು.

ಗಡ್ಡೆ ಗೆಣಸಿನ ಅರಿವು ಮೂಡಿಸುವ ದೃಷ್ಟಿಯಿಂದ ನಡೆಸಲಾಗಿರುವ ಪ್ರಬಂಧ ಸ್ಪರ್ಧೆ ಹಾಗೂ ಪೋಸ್ಟ್ ಕಾರ್ಡ್‌ನಲ್ಲಿ ಚಿತ್ರ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಗಡ್ಡೆ ಗೆಣಸು ಹಾಗೂ ಸೊಪ್ಪು ಕೃಷಿಯ ಬಗ್ಗೆ ಮಾಹಿತಿ ಕೈಪಿಡಿಯೂ ಕಾರ್ಯಕ್ರಮದಲ್ಲಿ ಬಿಡುಗಡೆಗೊಳ್ಳಲಿದೆ. ಸೊಪ್ಪು ಹಾಗೂ ಗಡ್ಡೆ ಗೆಣಸುಗಳ ತಾಜಾ ತಿಂಡಿ ತಿನಿಸುಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮ : ಜ. 4 ರಂದು ಸಂಜೆ 6..30 ರಿಂದ ರಾಜ್ಯ ಪ್ರಶಸ್ತಿ ವಿಜೇತ ಕಲಾಕುಂಭ ಕಲಾವಿದರಿಂದ ತುಳುನಾಡ ವೈಭವ ನೃತ್ಯರೂಪಕ, ಜ.5 ರಂದು ಮಧ್ಯಾಹ್ನ 2.30 ರಿಂದ ಪಿರಿಯಾಪಟ್ಟಣ ಜೇನುಕುರುಬ ಜನಾಂಗದ ಮಕ್ಕಳಿಂದ ಬುಡಕಟ್ಟು ನೃತ್ಯ, ಸರಯೂ ಬಾಲ ಯಕ್ಷವೃಂದದಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.

ಎರಡು ದಿನ ರೈತರಿಗಾಗಿ ತರಬೇತಿ ಆಯೋಜಿಸಲಾಗಿದೆ. ಗೆಡ್ಡೆ ಗೆಣಸು ಮತ್ತು ಸೊಪ್ಪು ಕೃಷಿ ತರಬೇತಿ ನೀಡಲಾಗುವುದು. ಗೆಡ್ಡೆ ಗೆಣಸು ಹಾಗೂ ಸೊಪ್ಪಿನ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗೋಷ್ಟಿ ಆಯೋಜಿಸಲಾಗಿದೆ. ಗಡ್ಡೆ ಗೆಣಸು, ಸೊಪ್ಪಿನ ವಿವಿಧ ಆಹಾರ ಖಾದ್ಯಗಳ ಮಾರಾಟ ಮಳಿಗೆಗಳು ಇರಲಿವೆ ಎಂದರು.

ಪ್ರಮುಖರಾದ ಎಸ್.ಎ. ಪ್ರಭಾಕರ ಶರ್ಮಾ, ಕಾರ್ಯದರ್ಶಿ ಕೆ. ರತ್ನಾಕರ ಕುಳಾಯಿ, ಸಮಿತಿ ಸಂಚಾಲಕ ಎ. ಸೋಮಪ್ಪ ನಾಯ್ಕ, ರಾಮಚಂದ್ರ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

7 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

7 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

23 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

23 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

24 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

24 hours ago