ದಯೆ ತೋರು ಶ್ರೀ ತುಳಸಿ

November 26, 2020
10:00 PM
ಕರವ ಮುಗಿದು ಶಿರವ ಬಾಗಿ
ಬೇಡುವೆನು ಅಮ್ಮ ತಾಯೆ
ವರವ ಕೊಡು ಹರಿಯ ಸಖಿ
ನಮಿಸುವೆನು ಎನ್ನ ಕಾಯೆ  ||
ಉದಯಕಾಲ ಮಡಿಯನುಟ್ಟು
ಸುಮಗಳಿಂದ ಪೂಜೆಗೈವೆ
ಭಕ್ತಿಯಲಿ ಬೇಡುವೆನು
ಹರಿಯ ಸ್ಮರಣೆ ಮಾಡುವೆನು  ||
ದಯೆಯ ತೋರು ಶ್ರೀ ತುಳಸಿ
ಅರಸಿನ ಕುಂಕುಮದ ಒಡತಿ
ಸಂತಾನಭಾಗ್ಯ ನೀಡಿ ಬೆಳಗು
ವರಿಸಿದ ಮನೆಯ ಪ್ರಣತಿ  ||
ಧೂಪದೀಪವನ್ನು ಬೆಳಗಿ
ನಿತ್ಯ ನಿನ್ನ ಪೂಜೆಗೈವೆ
ತಾಪವನ್ನು ದೂರಮಾಡು
ಸತ್ಯ ನಿನ್ನ ಜಪವಗೈವೆ  ||
ಕ್ಲೇಶವನ್ನು ದೂರಮಾಡು
ತೋಷವನ್ನು ಎನಗೆ ನೀಡು
ದಾತೆ ವೃಂದೆ ನಮಿಪೆ ನಿನಗೆ
ಮಾತೆ ನಿಂದೆ ಚರಣಕೆರಗಿ    ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಯಕೆ, ಕಾಮ, ಆಕರ್ಷಣೆ, ಪ್ರೀತಿ ಮತ್ತು ಪ್ರೇಮ – ಜೀವನದ ಅಂತರಂಗದ ಹಂತಗಳು
February 28, 2026
7:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಮನೆಯಲ್ಲೇ ಸುಲಭವಾಗಿ ಮಾಡುವ ಎಳೆಯ ಹಲಸಿನ ಕಾಯಿ ಸುಕ್ಕ
February 28, 2026
7:00 AM
by: ದಿವ್ಯ ಮಹೇಶ್
ಹೊಸರುಚಿ | ಎಳೆಯ ಹಲಸಿನ ಕಾಯಿ 65 – ಕರಕರಾ, ರುಚಿಕರ ಸ್ನ್ಯಾಕ್ ರೆಸಿಪಿ
February 22, 2026
9:09 AM
by: ದಿವ್ಯ ಮಹೇಶ್
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror