ದಯೆ ತೋರು ಶ್ರೀ ತುಳಸಿ

November 26, 2020
10:00 PM
ಕರವ ಮುಗಿದು ಶಿರವ ಬಾಗಿ
ಬೇಡುವೆನು ಅಮ್ಮ ತಾಯೆ
ವರವ ಕೊಡು ಹರಿಯ ಸಖಿ
ನಮಿಸುವೆನು ಎನ್ನ ಕಾಯೆ  ||
ಉದಯಕಾಲ ಮಡಿಯನುಟ್ಟು
ಸುಮಗಳಿಂದ ಪೂಜೆಗೈವೆ
ಭಕ್ತಿಯಲಿ ಬೇಡುವೆನು
ಹರಿಯ ಸ್ಮರಣೆ ಮಾಡುವೆನು  ||
ದಯೆಯ ತೋರು ಶ್ರೀ ತುಳಸಿ
ಅರಸಿನ ಕುಂಕುಮದ ಒಡತಿ
ಸಂತಾನಭಾಗ್ಯ ನೀಡಿ ಬೆಳಗು
ವರಿಸಿದ ಮನೆಯ ಪ್ರಣತಿ  ||
ಧೂಪದೀಪವನ್ನು ಬೆಳಗಿ
ನಿತ್ಯ ನಿನ್ನ ಪೂಜೆಗೈವೆ
ತಾಪವನ್ನು ದೂರಮಾಡು
ಸತ್ಯ ನಿನ್ನ ಜಪವಗೈವೆ  ||
ಕ್ಲೇಶವನ್ನು ದೂರಮಾಡು
ತೋಷವನ್ನು ಎನಗೆ ನೀಡು
ದಾತೆ ವೃಂದೆ ನಮಿಪೆ ನಿನಗೆ
ಮಾತೆ ನಿಂದೆ ಚರಣಕೆರಗಿ    ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!
June 21, 2026
3:51 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಲಸಿನ ಕಾಯಿ ತಂಬುಳಿ – ಊಟಕ್ಕೆ ತಂಪು ನೀಡುವ ಸಾಂಪ್ರದಾಯಿಕ ಸವಿರುಚಿ
June 20, 2026
10:01 AM
by: ದಿವ್ಯ ಮಹೇಶ್
ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror