ದಯೆ ತೋರು ಶ್ರೀ ತುಳಸಿ

November 26, 2020
10:00 PM
ಕರವ ಮುಗಿದು ಶಿರವ ಬಾಗಿ
ಬೇಡುವೆನು ಅಮ್ಮ ತಾಯೆ
ವರವ ಕೊಡು ಹರಿಯ ಸಖಿ
ನಮಿಸುವೆನು ಎನ್ನ ಕಾಯೆ  ||
ಉದಯಕಾಲ ಮಡಿಯನುಟ್ಟು
ಸುಮಗಳಿಂದ ಪೂಜೆಗೈವೆ
ಭಕ್ತಿಯಲಿ ಬೇಡುವೆನು
ಹರಿಯ ಸ್ಮರಣೆ ಮಾಡುವೆನು  ||
ದಯೆಯ ತೋರು ಶ್ರೀ ತುಳಸಿ
ಅರಸಿನ ಕುಂಕುಮದ ಒಡತಿ
ಸಂತಾನಭಾಗ್ಯ ನೀಡಿ ಬೆಳಗು
ವರಿಸಿದ ಮನೆಯ ಪ್ರಣತಿ  ||
ಧೂಪದೀಪವನ್ನು ಬೆಳಗಿ
ನಿತ್ಯ ನಿನ್ನ ಪೂಜೆಗೈವೆ
ತಾಪವನ್ನು ದೂರಮಾಡು
ಸತ್ಯ ನಿನ್ನ ಜಪವಗೈವೆ  ||
ಕ್ಲೇಶವನ್ನು ದೂರಮಾಡು
ತೋಷವನ್ನು ಎನಗೆ ನೀಡು
ದಾತೆ ವೃಂದೆ ನಮಿಪೆ ನಿನಗೆ
ಮಾತೆ ನಿಂದೆ ಚರಣಕೆರಗಿ    ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..
August 21, 2026
6:28 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror