ದಯೆ ತೋರು ಶ್ರೀ ತುಳಸಿ

November 26, 2020
10:00 PM
ಕರವ ಮುಗಿದು ಶಿರವ ಬಾಗಿ
ಬೇಡುವೆನು ಅಮ್ಮ ತಾಯೆ
ವರವ ಕೊಡು ಹರಿಯ ಸಖಿ
ನಮಿಸುವೆನು ಎನ್ನ ಕಾಯೆ  ||
ಉದಯಕಾಲ ಮಡಿಯನುಟ್ಟು
ಸುಮಗಳಿಂದ ಪೂಜೆಗೈವೆ
ಭಕ್ತಿಯಲಿ ಬೇಡುವೆನು
ಹರಿಯ ಸ್ಮರಣೆ ಮಾಡುವೆನು  ||
ದಯೆಯ ತೋರು ಶ್ರೀ ತುಳಸಿ
ಅರಸಿನ ಕುಂಕುಮದ ಒಡತಿ
ಸಂತಾನಭಾಗ್ಯ ನೀಡಿ ಬೆಳಗು
ವರಿಸಿದ ಮನೆಯ ಪ್ರಣತಿ  ||
ಧೂಪದೀಪವನ್ನು ಬೆಳಗಿ
ನಿತ್ಯ ನಿನ್ನ ಪೂಜೆಗೈವೆ
ತಾಪವನ್ನು ದೂರಮಾಡು
ಸತ್ಯ ನಿನ್ನ ಜಪವಗೈವೆ  ||
ಕ್ಲೇಶವನ್ನು ದೂರಮಾಡು
ತೋಷವನ್ನು ಎನಗೆ ನೀಡು
ದಾತೆ ವೃಂದೆ ನಮಿಪೆ ನಿನಗೆ
ಮಾತೆ ನಿಂದೆ ಚರಣಕೆರಗಿ    ||
# ರೂಪಾಪ್ರಸಾದ ಕೋಡಿಂಬಳ

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸ್ವಲ್ಪ ಜಾಗೃತರಾಗಿ.. | ಐಪಿಎಲ್ ಹಬ್ಬವೋ – ತಿಥಿಯೋ – ಶಾಪವೋ… | ಕ್ರಿಕೆಟ್ ಆಟ – ಬೆಟ್ಟಿಂಗ್ ದಂಧೆ – ಜೂಜಿನ ಮಜಾ ಪ್ರಾರಂಭ…..
March 26, 2024
1:12 PM
by: ವಿವೇಕಾನಂದ ಎಚ್‌ ಕೆ
ಪ್ರಜಾಪ್ರಭುತ್ವದ ದೊಡ್ಡ ಹಬ್ಬ ಚುನಾವಣೆ | ಈ ಬಾರಿಯೂ ಕೋವಿ ಠೇವಣಾತಿ ಗೊಂದಲ | ಕೃಷಿಕರಿಗೆ ತಪ್ಪದ ಬವಣೆ | ಮೂರು ವರ್ಷಗಳಿಂದಲೂ ರೈತರ ಬೇಡಿಕೆಗೆ ಸಿಗದ ಮಾನ್ಯತೆ |
March 20, 2024
10:42 PM
by: ಮಹೇಶ್ ಪುಚ್ಚಪ್ಪಾಡಿ
ಜ್ಞಾನದ ಮರುಪೂರಣ ಅಗತ್ಯ…… ಮರು ಭರ್ತಿ ಮಾಡದಿದ್ರೆ ನಮ್ಮ ವ್ಯಕ್ತಿತ್ವ ಕುಬ್ಜವಾಗುತ್ತಾ ಹೋಗುತ್ತದೆ
March 15, 2024
3:05 PM
by: ವಿವೇಕಾನಂದ ಎಚ್‌ ಕೆ
ಹಾಲು ಮಾಂಸಾಹಾರವೇ…? ಹಾಲಿಗೆ ತನ್ನದೇ ಆದ ಶ್ರೇಷ್ಠತೆ ಇದೆ..
March 15, 2024
2:06 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror